‘ಕ್ರೀಡಾಂಗಣದಲ್ಲಿದ್ದ ಸಿಸಿ ಕ್ಯಾಮೆರಾವನ್ನು ಜಖಂ ಮಾಡಲಾಗಿದೆ. ಅದರ ಡಿಡಿಆರ್ ಅನ್ನೂ ಸುಶೀಲ್ ತೆಗೆದುಕೊಂಡು ಹೋಗಿದ್ದಾರೆ. ಅವರಿಂದ ಅದನ್ನು ವಶಪಡಿಸಿಕೊಳ್ಳಬೇಕಿದೆ. ಅಲ್ಲದೇ ಸಾಗರ್ ಮೇಲೆ ಹಲ್ಲೆ ಮಾಡಿದ ಕಾರಣವನ್ನೂ ತಿಳಿಯಬೇಕಿದೆ. ಆದ್ದರಿಂದ ಸುಶೀಲ್ ಅವರನ್ನು 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಬೇಕು‘ ಎಂದು ಹೆಚ್ಚುವರಿ ಸರ್ಕಾರಿ ಅಭಿಯೋಜಕ ಅತುಲ್ ಶ್ರೀವಾಸ್ತವ ಮನವಿ ಮಾಡಿದರು.