<p><strong>ಭುವನೇಶ್ವರ:</strong> ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಿನ್ನದ ಪದಕ ಗೆದ್ದರೆ ತಂಡದ ಆಟಗಾರರಿಗೆ ತಲಾ ₹1 ಕೋಟಿ ನಗದು ಬಹುಮಾನ ನೀಡಲಾಗುವುದು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.</p>.<p>ವಿಶ್ವಕಪ್ ಟೂರ್ನಿಯ ಪಂದ್ಯಗಳು ನಡೆಯುವ ರೂರ್ಕೆಲಾದ ಬಿರ್ಸಾ ಮುಂಡಾ ಹಾಕಿ ಕ್ರೀಡಾಂಗಣ ಕಾಂಪ್ಲೆಕ್ಸ್ನಲ್ಲಿ ನಿರ್ಮಿಸಿರುವ ‘ವಿಶ್ವಕಪ್ ಗ್ರಾಮ’ವನ್ನು ಅವರು ಗುರುವಾರ ಉದ್ಘಾಟಿಸಿದರು.</p>.<p>ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ವಿವಿಧ ದೇಶಗಳ ಆಟಗಾರರ ವಾಸ್ತವ್ಯಕ್ಕೆ ‘ವಿಶ್ವಕಪ್ ಗ್ರಾಮ’ವನ್ನು ದಾಖಲೆಯ 9 ತಿಂಗಳಲ್ಲಿ ನಿರ್ಮಿಸಲಾಗಿದೆ. 225 ಕೊಠಡಿಗಳು ಒಳಗೊಂಡಂತೆ ಎಲ್ಲ ಸೌಲಭ್ಯಗಳು ಇಲ್ಲಿವೆ.</p>.<p>‘ನಮ್ಮ ತಂಡ ವಿಶ್ವಕಪ್ ಗೆದ್ದರೆ ಎಲ್ಲ ಆಟಗಾರರಿಗೆ ತಲಾ ₹1 ಕೋಟಿ ನಗದು ಬಹುಮಾನ ನೀಡಲಾಗುವುದು. ಭಾರತ ತಂಡ ಶ್ರೇಷ್ಠ ಆಟವಾಡಲಿ ಎಂದು ಶುಭಹಾರೈಸುತ್ತೇನೆ’ ಎಂದು ಪಟ್ನಾಯಕ್ ಹೇಳಿದರು.</p>.<p>ಭಾರತವು ವಿಶ್ವಕಪ್ ಗೆದ್ದರೆ ಆಟಗಾರರಿಗೆ ತಲಾ ₹ 25 ಲಕ್ಷ ಮತ್ತು ನೆರವು ಸಿಬ್ಬಂದಿಗೆ ತಲಾ ₹ 5 ಲಕ್ಷ ಬಹುಮಾನ ನೀಡುವುದಾಗಿ ಹಾಕಿ ಇಂಡಿಯಾ ಈ ಹಿಂದೆ ಘೋಷಿಸಿತ್ತು. ವಿಶ್ವಕಪ್ ಟೂರ್ನಿ ಇದೇ ತಿಂಗಳ 13 ರಿಂದ 29ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಿನ್ನದ ಪದಕ ಗೆದ್ದರೆ ತಂಡದ ಆಟಗಾರರಿಗೆ ತಲಾ ₹1 ಕೋಟಿ ನಗದು ಬಹುಮಾನ ನೀಡಲಾಗುವುದು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ.</p>.<p>ವಿಶ್ವಕಪ್ ಟೂರ್ನಿಯ ಪಂದ್ಯಗಳು ನಡೆಯುವ ರೂರ್ಕೆಲಾದ ಬಿರ್ಸಾ ಮುಂಡಾ ಹಾಕಿ ಕ್ರೀಡಾಂಗಣ ಕಾಂಪ್ಲೆಕ್ಸ್ನಲ್ಲಿ ನಿರ್ಮಿಸಿರುವ ‘ವಿಶ್ವಕಪ್ ಗ್ರಾಮ’ವನ್ನು ಅವರು ಗುರುವಾರ ಉದ್ಘಾಟಿಸಿದರು.</p>.<p>ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ವಿವಿಧ ದೇಶಗಳ ಆಟಗಾರರ ವಾಸ್ತವ್ಯಕ್ಕೆ ‘ವಿಶ್ವಕಪ್ ಗ್ರಾಮ’ವನ್ನು ದಾಖಲೆಯ 9 ತಿಂಗಳಲ್ಲಿ ನಿರ್ಮಿಸಲಾಗಿದೆ. 225 ಕೊಠಡಿಗಳು ಒಳಗೊಂಡಂತೆ ಎಲ್ಲ ಸೌಲಭ್ಯಗಳು ಇಲ್ಲಿವೆ.</p>.<p>‘ನಮ್ಮ ತಂಡ ವಿಶ್ವಕಪ್ ಗೆದ್ದರೆ ಎಲ್ಲ ಆಟಗಾರರಿಗೆ ತಲಾ ₹1 ಕೋಟಿ ನಗದು ಬಹುಮಾನ ನೀಡಲಾಗುವುದು. ಭಾರತ ತಂಡ ಶ್ರೇಷ್ಠ ಆಟವಾಡಲಿ ಎಂದು ಶುಭಹಾರೈಸುತ್ತೇನೆ’ ಎಂದು ಪಟ್ನಾಯಕ್ ಹೇಳಿದರು.</p>.<p>ಭಾರತವು ವಿಶ್ವಕಪ್ ಗೆದ್ದರೆ ಆಟಗಾರರಿಗೆ ತಲಾ ₹ 25 ಲಕ್ಷ ಮತ್ತು ನೆರವು ಸಿಬ್ಬಂದಿಗೆ ತಲಾ ₹ 5 ಲಕ್ಷ ಬಹುಮಾನ ನೀಡುವುದಾಗಿ ಹಾಕಿ ಇಂಡಿಯಾ ಈ ಹಿಂದೆ ಘೋಷಿಸಿತ್ತು. ವಿಶ್ವಕಪ್ ಟೂರ್ನಿ ಇದೇ ತಿಂಗಳ 13 ರಿಂದ 29ರ ವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>