ಈ ನಡುವೆ ವಾಹಿನಿಯೊಂದರಲ್ಲಿ ಮುಖ್ಯಮಂತ್ರಿಗಳು ನೇರಪ್ರಸಾರದಲ್ಲಿದ್ದಾಗ ಕರೆ ಮಾಡಿದ ಪವಿತ್ರಾ ಸಂಕಟ ತೋಡಿಕೊಂಡಿದ್ದರು. ಗುಣಮಟ್ಟದ ಸೈಕಲ್ ಕೊಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಂಬಸಿ ಗ್ರೂಪ್, ಬ್ಲಾಸಂ ಆಸ್ಪತ್ರೆ ಮತ್ತು ಮಧುಸೂದನ್ ಅವರ ನೆರವಿನೊಂದಿಗೆ ಸೈಕಲ್ ವ್ಯವಸ್ಥೆ ಮಾಡಿದ್ದರು.