ಪುಣೆ: ಅತ್ಯುತ್ತಮ ಆಟವಾಡಿದ ಬೆಂಗಾಲ್ ವಾರಿಯರ್ಸ್ ತಂಡದವರು ಪ್ರೊ ಕಬಡ್ಡಿ ಲೀಗ್ ಟೂರ್ನಿಯಲ್ಲಿ ಜಯ ಗಳಿಸಿದರು.
ಇಲ್ಲಿನ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಾಲ್ 46–27ರಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು. ವಿಜೇತ ತಂಡದ ಪರ ಮಣಿಂದರ್ ಸಿಂಗ್ (12 ಪಾಯಿಂಟ್ಸ್) ಮತ್ತು ಶ್ರೀಕಾಂತ್ ಜಾಧವ್ (10) ಭರ್ಜರಿ ಆಟವಾಡಿದರು.
ಜಿದ್ದಾಜಿದ್ದಿನ ಪೈಪೋಟಿ ನಡೆದ ಪಂದ್ಯದ ಪ್ರಥಮಾರ್ಧದಲ್ಲಿ ಗುಜರಾತ್ 15–14ರಿಂದ ಮುಂದಿತ್ತು. ಆದರೆ ದ್ವಿತೀಯಾರ್ಧದಲ್ಲಿ ಬೆಂಗಾಲ್ ತಿರುಗೇಟು ನೀಡಿ ಗೆಲುವು ಒಲಿಸಿಕೊಂಡಿತು.
ಇನ್ನೊಂದು ಪಂದ್ಯದಲ್ಲಿ ಯುಪಿ ಯೋಧಾಸ್ 41–30ರಿಂದ ತೆಲುಗು ಟೈಟನ್ಸ್ ತಂಡವನ್ನು ಸೋಲಿಸಿತು.