ಪದಕಗಳನ್ನು ಗೆದ್ದಾಗ ಕ್ರೀಡಾಪಟುಗಳಿಗೆ ಕರೆ ಮಾಡಿ ಮಾತನಾಡಿದ ಮೋದಿ ಅವರು ಪ್ರತಿಯೊಬ್ಬರನ್ನೂ ಅಭಿನಂದಿಸಿದ್ದರು. ಬ್ಯಾಡ್ಮಿಂಟನ್ನಲ್ಲಿ ಬೆಳ್ಳಿ ಗೆದ್ದ ಉತ್ತರಪ್ರದೇಶದ ಐಎಎಸ್ ಅಧಿಕಾರಿ, ಕನ್ನಡಿಗ ಸುಹಾಸ್ ಯತಿರಾಜ್, ಚಿನ್ನ ಗೆದ್ದ ಕೃಷ್ಣ ನಗಾರ್, ಯುವ ಬ್ಯಾಡ್ಮಿಂಟನ್ ಪಟು ಪಲಕ್ ಕೊಹ್ಲಿ, ಶೂಟರ್ಗಳಾದ ಅವನಿ ಲೇಖರಾ, ಸಿಂಘರಾಜ್ ಅದಾನ, ಜಾವೆಲಿನ್ ಥ್ರೋ ಪಟು ದೇವೇಂದ್ರ ಜಜಾರಿಯ ಮತ್ತು ಹೈಜಂಪ್ ಪಟು ಮರಿಯಪ್ಪನ್ ತಂಗವೇಲು ಜೊತೆ ಗುರುವಾರ ಅವರು ವೈಯಕ್ತಿಕವಾಗಿ ಮಾತನಾಡಿದರು.