ಮೈಸೂರು: ಕರ್ನಾಟಕ ಅಂಚೆ ವೃತ್ತದ ಆಶ್ರಯದಲ್ಲಿ ನ.14 ರಿಂದ 16ರ ವರೆಗೆ ಮೈಸೂರಿನಲ್ಲಿ 34ನೇ ಅಖಿಲ ಭಾರತ ಅಂಚೆ ಅಥ್ಲೆಟಿಕ್ಸ್ ಮತ್ತು ಸೈಕ್ಲಿಂಗ್ ಚಾಂಪಿಯನ್ಷಿಪ್ ಆಯೋಜಿಸಲಾಗಿದೆ.
ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ಅಥ್ಲೆಟಿಕ್ಸ್ ಕೂಟದಲ್ಲಿ ದೇಶದ 15 ಅಂಚೆ ವೃತ್ತಗಳ ಸುಮಾರು 220 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೊ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.