ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ನಮ್ಮ ಕ್ರೀಡಾಪಟುಗಳು ದೇಶದ ಹೆಮ್ಮೆ. ಜಾಗತಿಕ ಮಟ್ಟದಲ್ಲಿ ತಮ್ಮ ಸಾಧನೆಯಿಂದ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಉಲ್ಲೇಖ ಮಾಡಿದರು.
ಭಾರತ ಕುಸ್ತಿ ಫೆಡರೇಷನ್ ಮತ್ತು ಅದರ ಅಧ್ಯಕ್ಷರ ವಿರುದ್ಧ ಲೈಂಗಿಕ ದೌರ್ಜನ್ಯ ಸೇರಿದಂತೆ ಕುಸ್ತಿಪಟುಗಳು ಗಂಭೀರ ಆರೋಪ ಮಾಡಿದ್ದಾರೆ. ಆಟಗಾರರ ಧ್ವನಿಯನ್ನು ಆಲಿಸಬೇಕು ಎಂದು ಹೇಳಿದರು.
हमारे खिलाड़ी देश की शान हैं। विश्व स्तर पर अपने प्रदर्शन से वे देश का मान बढ़ाते हैं। कुश्ती फेडरेशन व उसके अध्यक्ष पर खिलाड़ियों ने शोषण के गंभीर आरोप लगाए हैं। इन खिलाड़ियों की आवाज सुनी जानी चाहिए।