<p><strong>ಬೆಂಗಳೂರು:</strong> ಪ್ರೊ ಕಬಡ್ಡಿ ಲೀಗ್ನ (ಪಿಕೆಎಲ್) ಎಂಟನೇ ಆವೃತ್ತಿಯ ಟೂರ್ನಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಡಿಸೆಂಬರ್ 22ರಿಂದ ಪಂದ್ಯಗಳು ನಡೆಯಲಿದ್ದು, ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಿಲ್ಲ ಎಂದು ಲೀಗ್ನ ಆಯೋಜಕರು ತಿಳಿಸಿದ್ದಾರೆ.</p>.<p>ಟೂರ್ನಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಆಗಸ್ಟ್ 29ರಿಂದ 31ರವರೆಗೆ ಮುಂಬೈನಲ್ಲಿ ನಡೆದಿತ್ತು.</p>.<p>‘ಆಟಗಾರರು ಮತ್ತು ಎಲ್ಲಾ ಭಾಗೀದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಈ ವರ್ಷ ಲೀಗ್ ಅನ್ನು ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಆಯೋಜಿಸಲಾಗುತ್ತದೆ‘ ಎಂದು ಈ ಕ್ರೀಡಾಕೂಟ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ತಿಳಿಸಿದೆ.</p>.<p>‘ಮಹತ್ವದ ಟೂರ್ನಿಗಳನ್ನು ಆಯೋಜಿಸಲು ಬೇಕಾದ ಎಲ್ಲ ಸೌಲಭ್ಯಗಳು, ಸುರಕ್ಷಾ ವ್ಯವಸ್ಥೆಗಳು ಬೆಂಗಳೂರಿನಲ್ಲಿವೆ. ಪಿಕೆಎಲ್ ಆಯೋಜಿಸಲು ನಾವು ಕಾತರರಾಗಿದ್ದೇವೆ‘ ಎಂದು ಮಶಾಲ್ ಸ್ಪೋರ್ಟ್ಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ.</p>.<p>‘ಕಬಡ್ಡಿ ಭಾರತದ ದೇಶೀಯ ಕ್ರೀಡೆಯಾಗಿದೆ. ಕರ್ನಾಟಕದಲ್ಲಿ ಬಹಳ ಜನಪ್ರಿಯವಾಗಿದೆ. ನಮ್ಮ ರಾಜ್ಯದಲ್ಲಿ ಮುಂಬರುವ ಪ್ರೊ ಕಬಡ್ಡಿ ಆವೃತ್ತಿಯ ಆಯೋಜನೆಯನ್ನು ನಾವು ಸ್ವಾಗತಿಸುತ್ತೇವೆ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ಸರ್ಕಾರದ ಕೋವಿಡ್ ತಡೆ ನಿಯಮಾವಳಿಗಳು ಅನುಸರಿಸಲು ಲೀಗ್ ಆಯೋಜಕರು, ಮಾರ್ಗಸೂಚಿಗಳನ್ನು ರಚಿಸಲಿದ್ದಾರೆ. ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ಜಾರಿ ಮತ್ತು ಬಯೋಬಬಲ್ ರಚಿಸಲು ವಿಶೇಷ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರೊ ಕಬಡ್ಡಿ ಲೀಗ್ನ (ಪಿಕೆಎಲ್) ಎಂಟನೇ ಆವೃತ್ತಿಯ ಟೂರ್ನಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಡಿಸೆಂಬರ್ 22ರಿಂದ ಪಂದ್ಯಗಳು ನಡೆಯಲಿದ್ದು, ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಿಲ್ಲ ಎಂದು ಲೀಗ್ನ ಆಯೋಜಕರು ತಿಳಿಸಿದ್ದಾರೆ.</p>.<p>ಟೂರ್ನಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಆಗಸ್ಟ್ 29ರಿಂದ 31ರವರೆಗೆ ಮುಂಬೈನಲ್ಲಿ ನಡೆದಿತ್ತು.</p>.<p>‘ಆಟಗಾರರು ಮತ್ತು ಎಲ್ಲಾ ಭಾಗೀದಾರರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಈ ವರ್ಷ ಲೀಗ್ ಅನ್ನು ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಆಯೋಜಿಸಲಾಗುತ್ತದೆ‘ ಎಂದು ಈ ಕ್ರೀಡಾಕೂಟ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ತಿಳಿಸಿದೆ.</p>.<p>‘ಮಹತ್ವದ ಟೂರ್ನಿಗಳನ್ನು ಆಯೋಜಿಸಲು ಬೇಕಾದ ಎಲ್ಲ ಸೌಲಭ್ಯಗಳು, ಸುರಕ್ಷಾ ವ್ಯವಸ್ಥೆಗಳು ಬೆಂಗಳೂರಿನಲ್ಲಿವೆ. ಪಿಕೆಎಲ್ ಆಯೋಜಿಸಲು ನಾವು ಕಾತರರಾಗಿದ್ದೇವೆ‘ ಎಂದು ಮಶಾಲ್ ಸ್ಪೋರ್ಟ್ಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಪಮ್ ಗೋಸ್ವಾಮಿ ತಿಳಿಸಿದ್ದಾರೆ.</p>.<p>‘ಕಬಡ್ಡಿ ಭಾರತದ ದೇಶೀಯ ಕ್ರೀಡೆಯಾಗಿದೆ. ಕರ್ನಾಟಕದಲ್ಲಿ ಬಹಳ ಜನಪ್ರಿಯವಾಗಿದೆ. ನಮ್ಮ ರಾಜ್ಯದಲ್ಲಿ ಮುಂಬರುವ ಪ್ರೊ ಕಬಡ್ಡಿ ಆವೃತ್ತಿಯ ಆಯೋಜನೆಯನ್ನು ನಾವು ಸ್ವಾಗತಿಸುತ್ತೇವೆ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ಸರ್ಕಾರದ ಕೋವಿಡ್ ತಡೆ ನಿಯಮಾವಳಿಗಳು ಅನುಸರಿಸಲು ಲೀಗ್ ಆಯೋಜಕರು, ಮಾರ್ಗಸೂಚಿಗಳನ್ನು ರಚಿಸಲಿದ್ದಾರೆ. ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ಜಾರಿ ಮತ್ತು ಬಯೋಬಬಲ್ ರಚಿಸಲು ವಿಶೇಷ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>