ಬುಧವಾರ ರಾತ್ರಿ ಅಕಾಲಿಕವಾಗಿ ಸುರಿದ ಮಳೆ ಹಾಗೂ ಬೀಸಿದ ಗಾಳಿಯಿಂದಾಗಿ ಬಾಳೆ ತೋಟ, ತರಕಾರಿ ಬೆಳೆ, ಕಲ್ಲಂಗಡಿ ಹಣ್ಣು, ನೆಲಗಡಲೆ ಸೇರಿದಂತೆ ಧಾನ್ಯಗಳ ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಭಾರಿ ಗಾಳಿ ಹಾಗೂ ಸಿಡಿಲಿನಿಂದಾಗಿ ಕಟ್ಟಡ ಹಾಗೂ ಕೃಷಿ ತೋಟಗಳಿಗೂ ಹಾನಿ ಆಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಇದರಿಂದಾಗಿ ಅಪಾರ ಪ್ರಮಾಣದ ಹಾನಿ ಆಗಿದ್ದು, ಕೂಡಲೇ ಜಿಲ್ಲಾಡಳಿತ ಹಾನಿಯ ವಿವರವನ್ನು ಪಡೆದು ಸಂತೃಸ್ತರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.