‘ವಿಧಾನಸಭೆ ಚುನಾವಣೆಯಲ್ಲಿ ನಾನು ಯಾವ ಪಕ್ಷದ ಪರವೂ ಇರುವುದಿಲ್ಲ. ಆದರೆ, ಬಿಜೆಪಿ ಮತ್ತು ಅದರ ಕೋಮುವಾದಿ ರಾಜಕೀಯವನ್ನು ವಿರೋಧಿಸಲಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಚಿಹ್ನೆಗಿಂತ ಅಭ್ಯರ್ಥಿಗಳ ಮುಖಕ್ಕೆ ಪ್ರಾಧಾನ್ಯತೆ ದೊರೆಯಬೇಕು. ನಾನು ಚುನಾವಣಾ ರಾಜಕೀಯ ಪ್ರವೇಶಿಸುವುದಿಲ್ಲ. ಪ್ರಶ್ನಿಸುವ ರಾಜಕೀಯದಲ್ಲಿ ಮಾತ್ರ ಇರುತ್ತೇನೆ. ಕರ್ನಾಟಕದ ಉದ್ದಗಲಕ್ಕೆ ‘Just asking’ ಅಭಿಯಾನ ಕಟ್ಟುತ್ತೇನೆ’ ಎಂದು ಪ್ರಕಾಶ್ ರೈ ಹೇಳಿದರು.