ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಅಂಜು ಬಾಬಿ ಜಾರ್ಜ್‌ ಮಾರ್ಗ

Last Updated 5 ಸೆಪ್ಟೆಂಬರ್ 2020, 16:46 IST
ಅಕ್ಷರ ಗಾತ್ರ

ಕೋಟ್ಟಯಂ(ಕೇರಳ): ಒಲಿಂಪಿಯನ್ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಮತ್ತು ಖ್ಯಾತ ವಾಲಿಬಾಲ್ ಆಟಗಾರ ಪಿ. ಭರತನ್ ನಾಯರ್ ಅವರ ಹೆಸರುಗಳನ್ನು ರಸ್ತೆಗಳಿಗೆ ಇಡಲಾಗಿದೆ.

‘ಇಬ್ಬರೂ ನಮ್ಮ ನಗರದ ಹೆಮ್ಮೆಯ ಕ್ರೀಡಾಪಟುಗಳು. ಅವರ ಸಾಧನೆಗಳನ್ನು ಗೌರವಿಸುವುದು ನಮ್ಮ ಕರ್ತವ್ಯ. ಬಹಳ ಕಾಲದ ಹಿಂದೆಯೇ ಈ ಕಾರ್ಯ ನಡೆಯಬೇಕಿತ್ತು. ಆದರೆ, ಈಗಲಾದರೂ ಮಾಡುವುದು ನಮ್ಮ ಜವಾಬ್ದಾರಿ’ ಎಂದು ಚಙನಶೇರಿ ಮುನ್ಸಿಪಲ್ ಮುಖ್ಯಸ್ಥ ಸಾಜನ್ ಫ್ರಾನ್ಸಿಸ್ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಂಜು, ‘ಇದೊಂದು ಅನಿರೀಕ್ಷಿತವಾಗಿ ಒಲಿದುಬಂದ ಗೌರವವಾಗಿದೆ. ನನ್ನ ತವರೂರಿನ ಜನರು ಗೌರವಿಸುತ್ತಿರುವುದು ಅತೀವ ಸಂತಸ ತಂದಿದೆ’ ಎಂದಿದ್ದಾರೆ.

1963ರಲ್ಲಿ ದೆಹಲಿಯಲ್ಲಿ ನಡೆದಿದ್ದ ಒಲಿಂಪಿಕ್ ಪೂರ್ವ ಕ್ವಾಲಿಫೈಯರ್ ಟೂರ್ನಿಯಲ್ಲಿ ಭರತನ್ ನಾಯರ್ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಚಙನಶೇರಿಯ ಪುಳವತುವಿನ ಅವರು 1956ರರಲ್ಲಿ ಪ್ಯಾರಿಸ್‌ನಲ್ಲಿ ನಡೆದಿದ್ದ ವಿಶ್ವ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿಯೂ ಆಡಿದ್ದರು. ಅವರು 2007ರಲ್ಲಿ ನಿಧನರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT