ಸೇಲಂ: ಕಬ್ಬಡ್ಡಿ ಆಟದ ವೇಳೆಯೇಕಬಡ್ಡಿ ಪಟುವೊಬ್ಬಹೃದಯ ಸ್ತಂಭನಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಸೇಲಂ ಬಳಿಯ ಮನಾದಿಕುಪ್ಪಂಪಟ್ಟಣದಲ್ಲಿ ನಡೆದಿದೆ.
ಮೃತನನ್ನು 22 ವರ್ಷದ ವಿಮಲ್ರಾಜ್ ಎಂದು ಗುರುತಿಸಲಾಗಿದೆ.ಸೇಲಂನ ‘ಸಾಮಿ ಕಬಡ್ಡಿ ಅಕಾಡೆಮಿ’ ಆಯೋಜಿಸಿದ್ದ ಕಬಡ್ಡಿ ಟೂರ್ನಿಯಲ್ಲಿ ಅವರು ಭಾಗವಹಿಸಿದ್ದರು.
ರೈಡಿಂಗ್ಗೆ ಹೋಗಿದ್ದವಿಮಲರಾಜ್ ಮೇಲೆ ಎದುರಾಳಿ ತಂಡದವರು ಆಕ್ರಮಣ ಮಾಡಿದ್ದಾರೆ. ಈ ವೇಳೆ ಎದುರಾಳಿ ತಂಡದ ಆಟಗಾರ ವಿಮಲರಾಜ್ ಮೇಲೆ ಓಡಿ ಬಂದು ಮೊಣಕಾಲು ಇಟ್ಟಿದ್ದಾನೆ. ಇದರಿಂದ ಸ್ಥಳದಲ್ಲೆ ಕುಸಿದ ವಿಮಲರಾಜ್, ಹೃದಯ ಸ್ತಂಭನದಿಂದಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
A 22-year-old student died of suspected heart attack while he was playing #Kabaddi at #Manadikuppam on Sunday night.