<p><strong>ನವದೆಹಲಿ: </strong>ಈ ವರ್ಷದ ಆಗಸ್ಟ್ ತಿಂಗಳ ಮಧ್ಯಂತರದಲ್ಲಿ ಶೂಟಿಂಗ್ ಶಿಬಿರಗಳನ್ನು ಪುನರಾರಂಭಿಸಲು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆಯು (ಎನ್ಆರ್ಎಐ) ಚಿಂತಿಸಿದೆ.</p>.<p>ಜುಲೈ 15ರಂದು ನಡೆಯುವ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.</p>.<p>ಮುಂದಿನ ವರ್ಷ ನಿಗದಿಯಾಗಿರುವಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಗಳಿಸಿರುವ ಹಾಗೂ ಅರ್ಹತೆಯ ಮೇಲೆ ಕಣ್ಣಿಟ್ಟಿರುವ 34 ಶೂಟರ್ಗಳ ಪಟ್ಟಿಯನ್ನು ಎನ್ಆರ್ಎಐ ಇತ್ತೀಚೆಗೆ ಬಿಡುಗಡೆ ಮಾಡಿತ್ತು.</p>.<p>‘ಜುಲೈ 15ರಂದು ನಿಗದಿಯಾಗಿರುವ ಸಭೆಯಲ್ಲಿ ಶಿಬಿರ ಪುನರಾರಂಭಿಸಲು ಇರುವ ಮಾರ್ಗಗಳ ಬಗ್ಗೆ ಚರ್ಚಿಸಲಾಗುತ್ತದೆ’ ಎಂದು ಎನ್ಆರ್ಎಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಜುಲೈ ಮಧ್ಯಂತರದಿಂದಲೇ ಶಿಬಿರಗಳನ್ನು ಆರಂಭಿಸಲು ಚಿಂತಿಸಲಾಗಿತ್ತು. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆ ಯೋಜನೆಯನ್ನು ಕೈಬಿಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ (ಆಗಸ್ಟ್ 15) ಬಳಿಕ ಶಿಬಿರಗಳನ್ನು ನಡೆಸುವ ಆಲೋಚನೆ ಇದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ತೀರ್ಮಾನವೇ ಅಂತಿಮವಾಗಲಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಒಲಿಂಪಿಕ್ಸ್ಗೆ ಈಗಾಗಲೇ ಅರ್ಹತೆ ಗಳಿಸಿರುವ ಹಾಗೂ ಅರ್ಹತೆಯ ಮೇಲೆ ಕಣ್ಣಿಟ್ಟಿರುವ ಶೂಟರ್ಗಳನ್ನು ಗಮನದಲ್ಲಿಟ್ಟುಕೊಂಡು ಶಿಬಿರ ಆಯೋಜಿಸಲು ನಿರ್ಧರಿಸಲಾಗಿದೆ. ಶೂಟರ್ಗಳು, ಕೋಚ್ಗಳು ಹಾಗೂ ಇತರ ಅಧಿಕಾರಿಗಳ ಸುರಕ್ಷತೆಯೂ ನಮ್ಮ ಆದ್ಯತೆಯಾಗಿದೆ’ ಎಂದಿದ್ದಾರೆ.</p>.<p>‘ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಹೀಗಾಗಿ ಡಾ.ಕರ್ಣಿ ಸಿಂಗ್ ಶೂಟಿಂಗ್ ರೇಂಜ್ನಲ್ಲಿ ಶಿಬಿರ ನಡೆಸುವುದು ತುಂಬಾ ಕಷ್ಟ’ ಎಂದು ಅನುಭವಿ ಶೂಟರ್ ಅಭಿಷೇಕ್ ವರ್ಮಾ ಸೋಮವಾರ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಈ ವರ್ಷದ ಆಗಸ್ಟ್ ತಿಂಗಳ ಮಧ್ಯಂತರದಲ್ಲಿ ಶೂಟಿಂಗ್ ಶಿಬಿರಗಳನ್ನು ಪುನರಾರಂಭಿಸಲು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆಯು (ಎನ್ಆರ್ಎಐ) ಚಿಂತಿಸಿದೆ.</p>.<p>ಜುಲೈ 15ರಂದು ನಡೆಯುವ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.</p>.<p>ಮುಂದಿನ ವರ್ಷ ನಿಗದಿಯಾಗಿರುವಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆ ಗಳಿಸಿರುವ ಹಾಗೂ ಅರ್ಹತೆಯ ಮೇಲೆ ಕಣ್ಣಿಟ್ಟಿರುವ 34 ಶೂಟರ್ಗಳ ಪಟ್ಟಿಯನ್ನು ಎನ್ಆರ್ಎಐ ಇತ್ತೀಚೆಗೆ ಬಿಡುಗಡೆ ಮಾಡಿತ್ತು.</p>.<p>‘ಜುಲೈ 15ರಂದು ನಿಗದಿಯಾಗಿರುವ ಸಭೆಯಲ್ಲಿ ಶಿಬಿರ ಪುನರಾರಂಭಿಸಲು ಇರುವ ಮಾರ್ಗಗಳ ಬಗ್ಗೆ ಚರ್ಚಿಸಲಾಗುತ್ತದೆ’ ಎಂದು ಎನ್ಆರ್ಎಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಜುಲೈ ಮಧ್ಯಂತರದಿಂದಲೇ ಶಿಬಿರಗಳನ್ನು ಆರಂಭಿಸಲು ಚಿಂತಿಸಲಾಗಿತ್ತು. ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆ ಯೋಜನೆಯನ್ನು ಕೈಬಿಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ (ಆಗಸ್ಟ್ 15) ಬಳಿಕ ಶಿಬಿರಗಳನ್ನು ನಡೆಸುವ ಆಲೋಚನೆ ಇದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯ್) ತೀರ್ಮಾನವೇ ಅಂತಿಮವಾಗಲಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>‘ಒಲಿಂಪಿಕ್ಸ್ಗೆ ಈಗಾಗಲೇ ಅರ್ಹತೆ ಗಳಿಸಿರುವ ಹಾಗೂ ಅರ್ಹತೆಯ ಮೇಲೆ ಕಣ್ಣಿಟ್ಟಿರುವ ಶೂಟರ್ಗಳನ್ನು ಗಮನದಲ್ಲಿಟ್ಟುಕೊಂಡು ಶಿಬಿರ ಆಯೋಜಿಸಲು ನಿರ್ಧರಿಸಲಾಗಿದೆ. ಶೂಟರ್ಗಳು, ಕೋಚ್ಗಳು ಹಾಗೂ ಇತರ ಅಧಿಕಾರಿಗಳ ಸುರಕ್ಷತೆಯೂ ನಮ್ಮ ಆದ್ಯತೆಯಾಗಿದೆ’ ಎಂದಿದ್ದಾರೆ.</p>.<p>‘ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಹೀಗಾಗಿ ಡಾ.ಕರ್ಣಿ ಸಿಂಗ್ ಶೂಟಿಂಗ್ ರೇಂಜ್ನಲ್ಲಿ ಶಿಬಿರ ನಡೆಸುವುದು ತುಂಬಾ ಕಷ್ಟ’ ಎಂದು ಅನುಭವಿ ಶೂಟರ್ ಅಭಿಷೇಕ್ ವರ್ಮಾ ಸೋಮವಾರ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>