ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಭಾರತ ತಂಡದ ನಾಯಕ ಮನ್ಪ್ರೀತ್ ಸಿಂಗ್, ಸುರೇಂದರ್ ಕುಮಾರ್, ಜಸ್ಕರನ್ ಸಿಂಗ್, ವರುಣ್ ಕುಮಾರ್, ಕೃಷ್ಣ ಬಹಾದ್ದೂರ್ ಪಾಠಕ್ ಹಾಗೂ ಮನದೀಪ್ ಸಿಂಗ್ ಅವರಿಗೆ ಕೋವಿಡ್ ದೃಢಪಟ್ಟಿತ್ತು. ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಆಗಸ್ಟ್ 17ರಂದು ಬಿಡುಗಡೆಗೊಂಡಿದ್ದರು. ತಂಡ ಸೇರಿಕೊಳ್ಳುವ ಮೊದಲು ಕೆಲವು ದಿನಗಳ ಕಾಲ ಪ್ರತ್ಯೇಕವಾಸದಲ್ಲಿದ್ದರು.