ಮಾದರಿ ನೀತಿ ಸಂಹಿತೆ ಸಂಬಂಧಿಸಿದಂತೆ ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಸಮಿತಿಯ ಗಮನಕ್ಕೆ ತಂದು ಪ್ರಕಟಿಸಬೇಕಿದೆ ಎಂದು ಜಿಲ್ಲಾಧಿಕಾರಿ ಕೋರಿದರು.ಜಾಹೀರಾತುಗಳು ವೈಯಕ್ತಿಕ, ಪ್ರಚೋದಾನ್ಮಾತಕ, ಧಾರ್ಮಿಕ ನಿಂದನೆ ಬರಹಗಳನ್ನು ಒಳಗೊಂಡಿರಬಾರದು. ಆ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಸಲಹೆ ಮಾಡಿದರು. ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ಆಯೋಜಿಸಲಾಗುತ್ತದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ 18 ವರ್ಷ ಪೂರ್ಣಗೊಂಡಿರುವವರು, ತಮ್ಮ ಹೆಸರು ಸೇರ್ಪಡೆಗೆ ಅವಕಾಶವಿದೆ ಎಂದು ಶ್ರೀವಿದ್ಯಾ ಹೇಳಿದರು.ರಾಜಕೀಯ ಪಕ್ಷಗಳ ಮುಖಂಡರಾದ ಸಜಿಲ್ ಕೃಷ್ಣ, ತನ್ನೇರಾ ಮೈನಾ, ಪ್ರೇಮಕುಮಾರ್ ಹಾಜರಿದ್ದರು.