ಚೆಲುವನ ಪಲ್ಲಕ್ಕಿಯನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಮೆರವಣೆಗೆ ಸಾಗುವ ರಾಜಬೀದಿ ತಳಿರು, ತೋರಣ, ದೀಪಾಲಂಕಾರದಿಂದ ಬೆಳಗುತ್ತಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದಲೂ ಭಕ್ತರು ಬಂದಿದ್ದರು. ಮೇಲುಕೋಟೆಯ ವಸತಿಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿತು ತುಂಬಿದ್ದವು.