ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಕಾಂತ್‌ ಅಲಭ್ಯ

Last Updated 25 ನವೆಂಬರ್ 2019, 19:03 IST
ಅಕ್ಷರ ಗಾತ್ರ

ನವದೆಹಲಿ: ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್‌ನಲ್ಲಿ (ಪಿಬಿಎಲ್‌) ಆಡದೇ ಇರಲು ಕಿದಂಬಿ ಶ್ರೀಕಾಂತ್ ನಿರ್ಧರಿಸಿದ್ದಾರೆ. 2020ರ ಟೋಕಿಯೊ ಒಲಿಂಪಿಕ್ಸ್ ಹಿನ್ನೆಲೆಯಲ್ಲಿ ಅಂತರ ರಾಷ್ಟ್ರೀಯ ಟೂರ್ನಿಗಳಿಗೆ ಹೆಚ್ಚು ಒತ್ತು ನೀಡುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಶ್ರೀಕಾಂತ್ ಕಳೆದ ಬಾರಿಯ ಟೂರ್ನಿಯಲ್ಲಿ ಬೆಂಗಳೂರು ರ‍್ಯಾಪ್ಟರ್ಸ್‌ ತಂಡಕ್ಕೆ ಚೊಚ್ಚಲ ಪ್ರಶಸ್ತಿ ಗೆದ್ದುಕೊಟ್ಟಿದ್ದರು. ಈ ಬಾರಿಯ ಟೂರ್ನಿ ಜನವರಿ 20ರಿಂದ ಫೆಬ್ರುವರಿ 9ರ ವರೆಗೆ ನಡೆಯಲಿದೆ.

‘ಮುಂದಿನ ಹಾದಿ ದುರ್ಗಮ ವಾಗಿದೆ. ನನ್ನ ಮೇಲಿನ ನಿರೀಕ್ಷೆಗಳನ್ನು ಸಾಕಾರಗೊಳಿಸಬೇಕಾದರೆ ಕಠಿಣ ಪ್ರಯತ್ನದ ಅಗತ್ಯವಿದೆ. ಆದ್ದರಿಂದ ಪಿಬಿಎಲ್‌ನಲ್ಲಿ ಆಡುವುದಿಲ್ಲ. ಬೆಂಗಳೂರು ರ‍್ಯಾಪ್ಟರ್ಸ್‌ ಈ ಬಾರಿಯೂ ಉತ್ತಮ ಸಾಧನೆ ಮಾಡಲಿ ಎಂದು ಆಶಿಸುತ್ತೇನೆ’ ಎಂದು ಶ್ರೀಕಾಂತ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT