<p><strong>ಬ್ಯಾಂಕಾಕ್</strong>: ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕೋವಿಡ್–19 ಪರೀಕ್ಷೆಗೆ ಒಳಗಾದ ವೇಳೆ ಭಾರತದ ಕಿದಂಬಿ ಶ್ರೀಕಾಂತ್ ಅವರ ಮೂಗಿನಿಂದ ರಕ್ತಸ್ರಾವವಾಯಿತು. ಇದರಿಂದ ಟೂರ್ನಿಯ ಆರೋಗ್ಯಾಧಿಕಾರಿಗಳ ಮೇಲೆ ಕಿಡಿಕಾರಿರುವ ಅವರು, ತಮಗೆ ಕಳಪೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ನಮ್ಮ ಕಾಳಜಿಯ ಹೊಣೆಯನ್ನು ನಾವೇ ಹೊತ್ತುಕೊಂಡು ಟೂರ್ನಿಗೆ ಆಗಮಿಸಿದ್ದೇವೆ. ನಾನು ನಾಲ್ಕು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೇನೆ. ಯಾವ ಪರೀಕ್ಷೆಯೂ ಸಮರ್ಪಕವಾಗಿ ನಡೆದಿದೆ ಎಂದು ನನಗನಿಸುತ್ತಿಲ್ಲ. ಇದನ್ನು ಒಪ್ಪಲಾಗದು‘ ಎಂದು ಶ್ರೀಕಾಂತ್ ಟ್ವೀಟ್ ಮಾಡಿದ್ದಾರೆ.</p>.<p>27 ವರ್ಷದ ಶ್ರೀಕಾಂತ್, ಟೂರ್ನಿಯ ಮೊದಲ ಪಂದ್ಯದಲ್ಲಿ ಬುಧವಾರ ಭಾರತದವರೇ ಆದ ಸೌರಭ್ ವರ್ಮಾ ವಿರುದ್ಧ ಕಣಕ್ಕಿಳಿಯಬೇಕಿತ್ತು.</p>.<p>ಮೂಗಿನಿಂದ ರಕ್ತ ಸುರಿಯುತ್ತಿರುವ ಚಿತ್ರವನ್ನು ಶ್ರೀಕಾಂತ್ ಅವರು ಟ್ವಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಶ್ರೀಕಾಂತ್ ಅವರ ಆರೋಗ್ಯದ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ. ಥಾಯ್ಲೆಂಡ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ನಾವು ವೈದ್ಯಕೀಯ ವರದಿಯನ್ನು ನಿರೀಕ್ಷಿಸುತ್ತಿದ್ದೇವೆ‘ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಹೇಳಿದೆ.</p>.<p>ಸೈನಾ ನೆಹ್ವಾಲ್ ಅವರಿಗೆ ಕೋವಿಡ್ ದೃಢಪಟ್ಟ ಕಾರಣ ಅವರ ಪತಿ ಪರುಪಳ್ಳಿ ಕಶ್ಯಪ್ ಅವರೂ ಟೂರ್ನಿಯಿಂದ ಹಿಂದೆ ಸರಿಯಬೇಕಿದೆ.</p>.<p>‘ಭಾರತ ತಂಡದ ಎಲ್ಲ ಆಟಗಾರರನ್ನು ಪ್ರಸ್ತುತ ತಾವಿರುವ ಹೋಟೆಲ್ನ ಕೋಣೆಗಳಲ್ಲಿ ಸ್ವಯಂ-ಪ್ರತ್ಯೇಕವಾಸದಲ್ಲಿರಿಸಲಾಗಿದೆ‘ ಎಂದು ಬಿಡಬ್ಲ್ಯುಎಫ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಂಕಾಕ್</strong>: ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕೋವಿಡ್–19 ಪರೀಕ್ಷೆಗೆ ಒಳಗಾದ ವೇಳೆ ಭಾರತದ ಕಿದಂಬಿ ಶ್ರೀಕಾಂತ್ ಅವರ ಮೂಗಿನಿಂದ ರಕ್ತಸ್ರಾವವಾಯಿತು. ಇದರಿಂದ ಟೂರ್ನಿಯ ಆರೋಗ್ಯಾಧಿಕಾರಿಗಳ ಮೇಲೆ ಕಿಡಿಕಾರಿರುವ ಅವರು, ತಮಗೆ ಕಳಪೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ನಮ್ಮ ಕಾಳಜಿಯ ಹೊಣೆಯನ್ನು ನಾವೇ ಹೊತ್ತುಕೊಂಡು ಟೂರ್ನಿಗೆ ಆಗಮಿಸಿದ್ದೇವೆ. ನಾನು ನಾಲ್ಕು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೇನೆ. ಯಾವ ಪರೀಕ್ಷೆಯೂ ಸಮರ್ಪಕವಾಗಿ ನಡೆದಿದೆ ಎಂದು ನನಗನಿಸುತ್ತಿಲ್ಲ. ಇದನ್ನು ಒಪ್ಪಲಾಗದು‘ ಎಂದು ಶ್ರೀಕಾಂತ್ ಟ್ವೀಟ್ ಮಾಡಿದ್ದಾರೆ.</p>.<p>27 ವರ್ಷದ ಶ್ರೀಕಾಂತ್, ಟೂರ್ನಿಯ ಮೊದಲ ಪಂದ್ಯದಲ್ಲಿ ಬುಧವಾರ ಭಾರತದವರೇ ಆದ ಸೌರಭ್ ವರ್ಮಾ ವಿರುದ್ಧ ಕಣಕ್ಕಿಳಿಯಬೇಕಿತ್ತು.</p>.<p>ಮೂಗಿನಿಂದ ರಕ್ತ ಸುರಿಯುತ್ತಿರುವ ಚಿತ್ರವನ್ನು ಶ್ರೀಕಾಂತ್ ಅವರು ಟ್ವಟರ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಶ್ರೀಕಾಂತ್ ಅವರ ಆರೋಗ್ಯದ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ. ಥಾಯ್ಲೆಂಡ್ ಬ್ಯಾಡ್ಮಿಂಟನ್ ಸಂಸ್ಥೆಯಿಂದ ನಾವು ವೈದ್ಯಕೀಯ ವರದಿಯನ್ನು ನಿರೀಕ್ಷಿಸುತ್ತಿದ್ದೇವೆ‘ ಎಂದು ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ (ಬಿಡಬ್ಲ್ಯುಎಫ್) ಹೇಳಿದೆ.</p>.<p>ಸೈನಾ ನೆಹ್ವಾಲ್ ಅವರಿಗೆ ಕೋವಿಡ್ ದೃಢಪಟ್ಟ ಕಾರಣ ಅವರ ಪತಿ ಪರುಪಳ್ಳಿ ಕಶ್ಯಪ್ ಅವರೂ ಟೂರ್ನಿಯಿಂದ ಹಿಂದೆ ಸರಿಯಬೇಕಿದೆ.</p>.<p>‘ಭಾರತ ತಂಡದ ಎಲ್ಲ ಆಟಗಾರರನ್ನು ಪ್ರಸ್ತುತ ತಾವಿರುವ ಹೋಟೆಲ್ನ ಕೋಣೆಗಳಲ್ಲಿ ಸ್ವಯಂ-ಪ್ರತ್ಯೇಕವಾಸದಲ್ಲಿರಿಸಲಾಗಿದೆ‘ ಎಂದು ಬಿಡಬ್ಲ್ಯುಎಫ್ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>