ಬ್ಯಾಂಕಾಕ್: ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕೋವಿಡ್–19 ಪರೀಕ್ಷೆಗೆ ಒಳಗಾದ ವೇಳೆ ಭಾರತದ ಕಿದಂಬಿ ಶ್ರೀಕಾಂತ್ ಅವರ ಮೂಗಿನಿಂದ ರಕ್ತಸ್ರಾವವಾಯಿತು. ಇದರಿಂದ ಟೂರ್ನಿಯ ಆರೋಗ್ಯಾಧಿಕಾರಿಗಳ ಮೇಲೆ ಕಿಡಿಕಾರಿರುವ ಅವರು, ತಮಗೆ ಕಳಪೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.