‘ಕ್ರೀಡಾಕೂಟಕ್ಕಾಗಿ ನಗರದ 10 ಹೊರಾಂಗಣ ಕ್ರೀಡಾಂಗಣ ಮತ್ತು 6 ಒಳಾಂಗಣ ಕ್ರೀಡಾಂಗಣಗಳು ಸಜ್ಜುಗೊಂಡಿವೆ. ಒಟ್ಟು 48 ಕ್ರೀಡೆ ಮತ್ತು 28 ಸಾಂಸ್ಕೃತಿಕ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ನಡೆಸಲಾಗುತ್ತದೆ.ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ ₹2ಕೋಟಿ ಅನುದಾನ ಮೀಸಲಿಟ್ಟಿದ್ದು, ಈಗಾಗಲೇ ₹1ಕೋಟಿ ಮಂಜೂರು ಮಾಡಿದೆ. ಜತೆಗೆ ಕ್ರೀಡಾಪಟುಗಳಿಗೆ ಮೂರು ದಿನಗಳ ಒಒಡಿ ಸೌಲಭ್ಯ ಸಿಗಲಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ತಿಳಿಸಿದರು.