ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ: ಆಯುಷಿ, ಮೋಹನೀಶ್‌ಗೆ ಪ್ರಶಸ್ತಿ

Last Updated 12 ಸೆಪ್ಟೆಂಬರ್ 2021, 17:42 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತಮ ಸಾಮರ್ಥ್ಯ ತೋರಿದ ಆಯುಷಿ ಬಾಲಕೃಷ್ಣ ಗೋಡ್ಸೆ ಹಾಗೂ ಮೋಹನೀಶ್ ನಂದಿ ನಾರಾ ಅವರು ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಕೆಡೆಟ್‌ ಬಾಲಕಿಯರ ಮತ್ತು ಬಾಲಕರ ವಿಭಾಗಗಳಲ್ಲಿ ಭಾನುವಾರ ಪ್ರಶಸ್ತಿ ಜಯಿಸಿದರು.

ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಆಯುಷಿ 11-9, 11-5, 9-11, 11-9ರಿಂದ ಕೈರಾ ಬಾಳಿಗಾ ಎದುರು ಗೆದ್ದು ಬೀಗಿದರು. ಸೆಮಿಫೈನಲ್‌ನಲ್ಲಿ ಅವರು 11-5,11-9,6-11,11-4ರಿಂದ ವೃಶಾಲಿ ಕಿಣಿ ಅವರನ್ನು ಸೋಲಿಸಿದ್ದರು. ಬಾಲಕರ ಸಿಂಗಲ್ಸ್ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಮೋಹನೀಶ್ 11- 9, 11-9,6 -11, 9 -11, 11-7ರಿಂದ ತೇಶುಭ್ ದಿನೇಶ್ ಅವರನ್ನು ಸೋಲಿಸಿದರು. ನಾಲ್ಕರ ಘಟ್ಟದ ಪಂದ್ಯದಲ್ಲಿ ಮೋಹನೀಶ್‌ 11-8, 11-7, 14 -16, 11-4ರಿಂದ ಶೇಷನಾಥ್‌ ಅವರನ್ನು ಸೋಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT