‘ಲೋಕಪಾಲ್, ಲೋಕಾಯುಕ್ತರನ್ನು ನೇಮಿಸಲು ಹಾಗೂ ರೈತರ ಬೆಳೆಗೆ ನಿಗದಿತ ಬೆಂಬಲ ಬೆಲೆ ಘೋಷಿಸಲು ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದಲ್ಲಿ ಸೆಪ್ಟಂಬರ್ ನಂತರ ಮತ್ತೆ ಹೋರಾಟ ಕೈಗೊಳ್ಳುತ್ತೇನೆ’ ಎಂದು ಅಣ್ಣಾ ಹಜಾರೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.