‘ಗಾಯದಿಂದಾಗಿ ಐದು ತಿಂಗಳು ಮೈದಾನದಿಂದ ಹೊರಗುಳಿಯಬೇಕಿತ್ತು. ಆಗ ಭವಿಷ್ಯದ ಬಗ್ಗೆ ಚಿಂತೆ ಕಾಡಿತ್ತು. ಈ ಸಂಬಂಧ ಮುಖ್ಯ ಕೋಚ್ ಗ್ರಹಾಂ ರೀಡ್ ಜೊತೆಗೆ ಮಾತನಾಡಿದ್ದೆ. ಆಗ ಅವರು ನನ್ನಲ್ಲಿ ಆತ್ಮಸ್ಥೈರ್ಯ ತುಂಬಿದರು. ನನ್ನ ಮೇಲೆ ನಂಬಿಕೆ ಇಟ್ಟು ಮತ್ತೆ ತಂಡದಲ್ಲಿ ಆಡಲು ಅವಕಾಶ ಮಾಡಿಕೊಟ್ಟರು’ ಎಂದು ಹೇಳಿದ್ದಾರೆ.