ಶನಿವಾರ ಸ್ನೇಹಿತರೊಂದಿಗೆ ತೆರಳಿದ್ದ ಅರುಣ್ ಕಾಣೆಯಾಗಿದ್ದಾರೆ ಎಂದು ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತುಂಗಾ ನದಿಯ ಹಿನ್ನೀರಿನಲ್ಲಿ ಅರುಣ್ಗೆ ಸೇರಿದ ಪರ್ಸ್, ಮೊಬೈಲ್ ಹಾಗೂ ಶೂಗಳು ದೊರೆತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಅವುಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದರು. ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.