ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಕ್ಕೊ ಆಟಗಾರ ಅನುಮಾನಾಸ್ಪದ ಸಾವು: ಕೊಲೆ ಶಂಕೆ

Last Updated 1 ಜೂನ್ 2020, 20:00 IST
ಅಕ್ಷರ ಗಾತ್ರ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ರಾಷ್ಟ್ರಮಟ್ಟದ ಕೊಕ್ಕೊ ಆಟಗಾರ ಗೋಪಾಲಗೌಡ ಬಡಾವಣೆಯ ಅರುಣ್ (28) ಅವರ ಮೃತದೇಹ ಸೋಮವಾರತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಪತ್ತೆಯಾಗಿದೆ.

ಶನಿವಾರ ಸ್ನೇಹಿತರೊಂದಿಗೆ ತೆರಳಿದ್ದ ಅರುಣ್ ಕಾಣೆಯಾಗಿದ್ದಾರೆ ಎಂದು ಪೋಷಕರು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತುಂಗಾ ನದಿಯ ಹಿನ್ನೀರಿನಲ್ಲಿ ಅರುಣ್‌ಗೆ ಸೇರಿದ ಪರ್ಸ್, ಮೊಬೈಲ್ ಹಾಗೂ ಶೂಗಳು ದೊರೆತಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಅವುಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದರು. ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.

ಅರುಣ್‌ಗೆ ಈಚೆಗೆ ವಿವಾಹ ನಿಶ್ಚಿತಾರ್ಥ ಆಗಿತ್ತು. ಅವರನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ದೂರು ದಾಖಲಿಸಿದ್ದು ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT