ರಾಜ್ಯದಲ್ಲಿ ಈಜು ಕ್ರೀಡೆಗೆ ಹೊಸ ಆಯಾಮ ನೀಡಿದವರಲ್ಲಿ ಒಬ್ಬರಾಗಿರುವ ಜಗದಾಳೆ, ದೇಶದ ಪ್ರಸಿದ್ಧ ಕೇಂದ್ರಗಳಲ್ಲಿ ಒಂದಾದ ಬಸವನಗುಡಿ ಈಜು ಕೇಂದ್ರದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕೊಡಿಸುವುದಕ್ಕೆ ಆದ್ಯತೆ ನೀಡಿದ ಅವರು ಇದಕ್ಕಾಗಿ ಅನೇಕ ವಿದೇಶಿ ಕೋಚ್ಗಳನ್ನು ಉದ್ಯಾನ ನಗರಿಗೆ ಕರೆದುಕೊಂಡು ಬಂದಿದ್ದರು. ರಾಷ್ಟ್ರಮಟ್ಟದ ಅನೇಕ ಚಾಂಪಿಯನ್ಷಿಪ್ಗಳನ್ನು ಆಯೋಜಿಸಿ ಯುವ ಈಜುಪಟುಗಳು ಬೆಳಕಿಗೆ ಬರಲು ಕಾರಣರಾಗಿದ್ದರು.