ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧ ದಾಖಲಾಗಿದ್ದ ಆರೋಪಪಟ್ಟಿ ಕುರಿತ ವಿಚಾರಣೆಯ ವೇಳೆ, ‘ಪತ್ನಿ ಪುಷ್ಕರ್ ಅವರ ಆತ್ಮಹತ್ಯೆಗೆ ತರೂರ್ ಕುಮ್ಮಕ್ಕು ನೀಡಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ವಕೀಲರು ವಾದಿಸಿದರು.