‘2011ರಲ್ಲಿ ಆಶ್ರಮದಲ್ಲಿದ್ದ ನನ್ನ ಮೇಲೆ ಚಿನ್ಮಯಾನಂದ ಅತ್ಯಾಚಾರವೆಸಗಿದ್ದರು. ನಾನು ಗರ್ಭಿಣಿಯಾಗಿದ್ದಾಗ ಗರ್ಭಪಾತಕ್ಕೆ ಒತ್ತಾಯ ಮಾಡಿದ್ದರು’ ಎಂದು ಆರೋಪಿಸಿ ಸಂತ್ರಸ್ತೆ ಕೊಟ್ವಾಲಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್ಐಆರ್ ಕೂಡ ದಾಖಲಾಗಿತ್ತು. ಆದರೆ, ಚಿನ್ಮಯಾನಂದ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿದೆ. 2012ರಿಂದ ಹೈಕೋರ್ಟ್ನಲ್ಲಿ ಈ ಪ್ರಕರಣ ಬಾಕಿ ಇದೆ.