ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ಗೆ ಖೇಲ್ ರತ್ನ ಪ್ರಶಸ್ತಿ

Last Updated 30 ನವೆಂಬರ್ 2022, 20:56 IST
ಅಕ್ಷರ ಗಾತ್ರ

ನವದೆಹಲಿ: ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ ಅವರಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ ಗೌರವ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿಯನ್ನು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.‌

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಪ್ಯಾರಾ ಶೂಟಿಂಗ್ ಕೋಚ್ ಸುಮಾ ಶಿರೂರ್ ಅವರಿಗೆ ದ್ರೋಣಾಚಾರ್ಯ, ಅಥ್ಲೀಟ್ ಅಶ್ವಿನಿ ಅಕ್ಕುಂಜಿ ಹಾಗೂ ಕಬಡ್ಡಿ ಆಟಗಾರ ಬಿ.ಸಿ. ಸುರೇಶ್ ಅವರಿಗೆ ಧ್ಯಾನಚಂದ್ ಜೀವಮಾನ ಸಾಧನೆ ಪುರಸ್ಕಾರ ನೀಡಲಾಯಿತು. ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್, ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖತ್ ಜರೀನ್ ಸೇರಿದಂತೆ 25 ಕ್ರೀಡಾಪಟು ಗಳಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT