ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಪ್ಯಾರಾ ಶೂಟಿಂಗ್ ಕೋಚ್ ಸುಮಾ ಶಿರೂರ್ ಅವರಿಗೆ ದ್ರೋಣಾಚಾರ್ಯ, ಅಥ್ಲೀಟ್ ಅಶ್ವಿನಿ ಅಕ್ಕುಂಜಿ ಹಾಗೂ ಕಬಡ್ಡಿ ಆಟಗಾರ ಬಿ.ಸಿ. ಸುರೇಶ್ ಅವರಿಗೆ ಧ್ಯಾನಚಂದ್ ಜೀವಮಾನ ಸಾಧನೆ ಪುರಸ್ಕಾರ ನೀಡಲಾಯಿತು. ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್, ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ನಿಖತ್ ಜರೀನ್ ಸೇರಿದಂತೆ 25 ಕ್ರೀಡಾಪಟು ಗಳಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಯಿತು.