<p><strong>ಬೆಂಗಳೂರು: </strong>ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ರಾಜ್ಯದ ವಿವಿಧೆಡೆ ಈವರೆಗೆ ₹ 39.46 ಕೋಟಿ ನಗದು ಮತ್ತು ₹ 15.26 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದೆ.</p>.<p>ವಿಧಾನಸಭಾ ಚುನಾವಣೆ ಕಾರಣ ವಿವಿಧ ಜಿಲ್ಲೆಗಳಲ್ಲಿ ಮತ್ತು ಗಡಿ ಭಾಗಗಳಲ್ಲಿ ಚುನಾವಣಾ ಆಯೋಗ ಹದ್ದಿನ ಕಣ್ಣಿರಿಸಿದೆ. ಚೆಕ್ಪೋಸ್ಟ್ಗಳಲ್ಲಿ, ಅನುಮಾನ ಬಂದ ಸ್ಥಳಗಳಲ್ಲಿ ದಾಳಿ ನಡೆಸಿ ನಗದು ಮತ್ತು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳುತ್ತಿದೆ.</p>.<p>ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು 99 ಅಲ್ಯುಮಿನಿಯಂ ಬಾರ್ಗಳು, ₹ 39,46,67,167 ನಗದು, ₹15,26,80,000 ಮೌಲ್ಯದ 49 ಕೆ.ಜಿ 552 ಗ್ರಾಂ ಚಿನ್ನ, ₹ 15, 97,200 ಮೌಲ್ಯದ ಬೆಳ್ಳಿ, 600 ಕೆ.ಜಿ ತೂಕದ 268 ತಾಮ್ರದ ಬಿಂದಿಗೆಗಳು, ₹ 2,08, 40,343 ಮೌಲ್ಯದ ಮದ್ಯ ಮತ್ತು ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.<p>ಚುನಾವಣಾ ಆಯೋಗ ವಶಪಡಿಸಿಕೊಂಡಿರುವ ಬಹುಪಾಲು ನಗದು, ಚಿನ್ನ ಮತ್ತು ಇತರ ವಸ್ತುಗಳು ಚುನಾವಣೆಗೆ ಸಂಬಂಧಿಸಿದೇ ಆಗಿವೆ ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ರಾಜ್ಯದ ವಿವಿಧೆಡೆ ಈವರೆಗೆ ₹ 39.46 ಕೋಟಿ ನಗದು ಮತ್ತು ₹ 15.26 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದೆ.</p>.<p>ವಿಧಾನಸಭಾ ಚುನಾವಣೆ ಕಾರಣ ವಿವಿಧ ಜಿಲ್ಲೆಗಳಲ್ಲಿ ಮತ್ತು ಗಡಿ ಭಾಗಗಳಲ್ಲಿ ಚುನಾವಣಾ ಆಯೋಗ ಹದ್ದಿನ ಕಣ್ಣಿರಿಸಿದೆ. ಚೆಕ್ಪೋಸ್ಟ್ಗಳಲ್ಲಿ, ಅನುಮಾನ ಬಂದ ಸ್ಥಳಗಳಲ್ಲಿ ದಾಳಿ ನಡೆಸಿ ನಗದು ಮತ್ತು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳುತ್ತಿದೆ.</p>.<p>ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು 99 ಅಲ್ಯುಮಿನಿಯಂ ಬಾರ್ಗಳು, ₹ 39,46,67,167 ನಗದು, ₹15,26,80,000 ಮೌಲ್ಯದ 49 ಕೆ.ಜಿ 552 ಗ್ರಾಂ ಚಿನ್ನ, ₹ 15, 97,200 ಮೌಲ್ಯದ ಬೆಳ್ಳಿ, 600 ಕೆ.ಜಿ ತೂಕದ 268 ತಾಮ್ರದ ಬಿಂದಿಗೆಗಳು, ₹ 2,08, 40,343 ಮೌಲ್ಯದ ಮದ್ಯ ಮತ್ತು ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p>.<p>ಚುನಾವಣಾ ಆಯೋಗ ವಶಪಡಿಸಿಕೊಂಡಿರುವ ಬಹುಪಾಲು ನಗದು, ಚಿನ್ನ ಮತ್ತು ಇತರ ವಸ್ತುಗಳು ಚುನಾವಣೆಗೆ ಸಂಬಂಧಿಸಿದೇ ಆಗಿವೆ ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>