ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಿ ವಿಜೇತೆ ಮೀರಾಬಾಯಿ ಚಾನುಗೆ ₹2 ಕೋಟಿ ಬಹುಮಾನ, ರೈಲ್ವೆ ಹುದ್ದೆಯಲ್ಲಿ ಬಡ್ತಿ

Last Updated 27 ಜುಲೈ 2021, 2:29 IST
ಅಕ್ಷರ ಗಾತ್ರ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ವೇಟ್‌ಲಿಫ್ಟರ್‌ ಮೀರಾಬಾಯಿ ಚಾನು ಅವರಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಘೋಷಣೆ ಮಾಡಿದ್ದಾರೆ.

ತನ್ನ ಪ್ರತಿಭೆ, ಪರಿಶ್ರಮ ಮತ್ತು ಸ್ಥೈರ್ಯದಿಂದ ವಿಶ್ವದ ಲಕ್ಷಾಂತರ ಮಂದಿ ಮೀರಾಬಾಯಿ ಸ್ಫೂರ್ತಿಯಾಗಿದ್ದಾರೆ ಎಂದು ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಭಾರತದ ಹೆಮ್ಮೆ ಮೀರಾಬಾಯಿ ಚಾನು ಅವರಿಗೆ ಭಾರತೀಯ ರೈಲ್ವೆ ಅಭಿನಂದನೆ ಸಲ್ಲಿಸುತ್ತದೆ ಮತ್ತು ಅವರ ಸಾಧನೆಯನ್ನು ಗೌರವಿಸುತ್ತದೆ. ಇದರೊಂದಿಗೆ ₹ 2 ಕೋಟಿ ಬಹುಮಾನ ಮತ್ತು ರೈಲ್ವೆ ಹುದ್ದೆಯಲ್ಲಿ ಬಡ್ತಿ ನೀಡಲಾಗುವುದು. ಭಾರತಕ್ಕಾಗಿ ಹೀಗೆ ಗೆಲ್ಲುತ್ತಲೇ ಇರಬೇಕು ಎಂದು ಅಶ್ವಿನಿ ವೈಷ್ಣವ್‌ ಆಶಿಸಿದರು.

49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದು ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆಯಾಗಿದೆ.

29 ವರ್ಷದ ಮೀರಾಬಾಯಿ ಒಟ್ಟು 202 ಕೆ.ಜಿ (87 ಕೆ.ಜಿ. ಹಾಗೂ 115 ಕೆ.ಜಿ.) ಭಾರ ಎತ್ತುವ ಮೂಲಕ ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿದರು. 2000ರ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಕರ್ಣಂ ಮಲ್ಲೇಶ್ವರಿ ವೇಟ್‌ಲಿಫ್ಟಿಂಗ್ 69 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT