<p><strong>ಟೋಕಿಯೊ:</strong> ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎದುರಾಗಿರುವ ಸೋಲಿನಿಂದ ತೀವ್ರ ನೊಂದಿರುವ ಭಾರತದ ಅಗ್ರ ಬಿಲ್ಲುಗಾರಅತನು ದಾಸ್ ಕ್ಷಮೆಯಾಚಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅತನು, 'ನನ್ನನ್ನು ಕ್ಷಮಿಸಿ ಭಾರತ' ಎಂದು ಕೈ ಮುಗಿಯುವ ಇಮೋಜಿ ಹಾಕಿದ್ದಾರೆ. 'ಈ ಬಾರಿ ಒಲಿಂಪಿಕ್ಸ್ನಲ್ಲಿ ಕೀರ್ತಿ ತರಲು ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/sports-extra/tokyo-olympics-atanu-das-loses-to-furukawa-in-pre-quarters-indian-archery-campaign-ends-without-853321.html" itemprop="url">Tokyo Olympics ಆರ್ಚರಿ: ಬರಿಗೈಯಲ್ಲಿ ಮರಳಿದ ಭಾರತದ ಬಿಲ್ಲುಗಾರರು </a></p>.<p>ಈ ಸಂದರ್ಭದಲ್ಲಿ ಭಾರತ ಕ್ರೀಡಾ ಪ್ರಾಧಿಕಾರ, ಭಾರತದ ಆರ್ಚರಿ ಸಂಸ್ಥೆ ಹಾಗೂ ಒಲಿಂಪಿಕ್ ಸಮಿತಿಯಿಂದ ದೊರಕಿರುವ ಅಭೂತಪೂರ್ವ ಬೆಂಬಲವನ್ನು ಸ್ಮರಿಸಿದ್ದಾರೆ.</p>.<p>'ಇಲ್ಲಿಂದ ಮುಂದಕ್ಕೆ ಸಾಗೋಣ. ಇನ್ನೇನು ಹೇಳಲು ಬಯಸುವುದಿಲ್ಲ. ಜಯ್ ಹಿಂದ್' ಎಂದು ಅತನು ದಾಸ್ ಉಲ್ಲೇಖಿಸಿದ್ದಾರೆ.</p>.<p>ಆರ್ಚರಿಯಲ್ಲಿ ಭಾರತದ ಕೊನೆಯ ಭರವಸೆಯಾಗಿದ್ದ ಅತನು ದಾಸ್ ಸೋಲು ಅನುಭವಿಸುದರೊಂದಿಗೆ ದೇಶದ ಬಿಲ್ಲುಗಾರರು ಬರಿಗೈಯಲ್ಲಿ ಮರಳಿದ್ದರು.</p>.<p>ಪುರುಷರ ವೈಯಕ್ತಿಕ ವಿಭಾಗದ ಪ್ರೀ-ಕ್ವಾರ್ಟರ್ಫೈನಲ್ನಲ್ಲಿ ಅತನು ದಾಸ್ ಜಪಾನ್ನ ತಕಹರು ಪುರುಕಾವ ವಿರುದ್ಧ 4-6ರಲ್ಲಿ ಸೋಲು ಅನುಭವಿಸಿದರು.</p>.<p>ಈ ಮೂಲಕ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪ್ರೀ-ಕ್ವಾರ್ಟರ್ಫೈನಲ್ನಲ್ಲಿ ಸೋಲು ಎದುರಾಗಿದೆ.</p>.<p>ಅತನು ದಾಸ್ ಅವರ ಪತ್ನಿ ದೀಪಿಕಾ ಕುಮಾರಿ, ಸತತ ಮೂರನೇ ಬಾರಿಯೂ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲಾಗದೇ ವಾಪಸ್ ಆಗಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದ ಎಂಟರ ಘಟ್ಟದಲ್ಲಿ ದೀಪಿಕಾ, ದಕ್ಷಿಣ ಕೊರಿಯಾದ ಎನ್ ಸ್ಯಾನ್ ವಿರುದ್ದ 0-6ರ ಅಂತರದಲ್ಲಿ ಪರಾಭವಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೋಕಿಯೊ:</strong> ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎದುರಾಗಿರುವ ಸೋಲಿನಿಂದ ತೀವ್ರ ನೊಂದಿರುವ ಭಾರತದ ಅಗ್ರ ಬಿಲ್ಲುಗಾರಅತನು ದಾಸ್ ಕ್ಷಮೆಯಾಚಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅತನು, 'ನನ್ನನ್ನು ಕ್ಷಮಿಸಿ ಭಾರತ' ಎಂದು ಕೈ ಮುಗಿಯುವ ಇಮೋಜಿ ಹಾಕಿದ್ದಾರೆ. 'ಈ ಬಾರಿ ಒಲಿಂಪಿಕ್ಸ್ನಲ್ಲಿ ಕೀರ್ತಿ ತರಲು ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/sports-extra/tokyo-olympics-atanu-das-loses-to-furukawa-in-pre-quarters-indian-archery-campaign-ends-without-853321.html" itemprop="url">Tokyo Olympics ಆರ್ಚರಿ: ಬರಿಗೈಯಲ್ಲಿ ಮರಳಿದ ಭಾರತದ ಬಿಲ್ಲುಗಾರರು </a></p>.<p>ಈ ಸಂದರ್ಭದಲ್ಲಿ ಭಾರತ ಕ್ರೀಡಾ ಪ್ರಾಧಿಕಾರ, ಭಾರತದ ಆರ್ಚರಿ ಸಂಸ್ಥೆ ಹಾಗೂ ಒಲಿಂಪಿಕ್ ಸಮಿತಿಯಿಂದ ದೊರಕಿರುವ ಅಭೂತಪೂರ್ವ ಬೆಂಬಲವನ್ನು ಸ್ಮರಿಸಿದ್ದಾರೆ.</p>.<p>'ಇಲ್ಲಿಂದ ಮುಂದಕ್ಕೆ ಸಾಗೋಣ. ಇನ್ನೇನು ಹೇಳಲು ಬಯಸುವುದಿಲ್ಲ. ಜಯ್ ಹಿಂದ್' ಎಂದು ಅತನು ದಾಸ್ ಉಲ್ಲೇಖಿಸಿದ್ದಾರೆ.</p>.<p>ಆರ್ಚರಿಯಲ್ಲಿ ಭಾರತದ ಕೊನೆಯ ಭರವಸೆಯಾಗಿದ್ದ ಅತನು ದಾಸ್ ಸೋಲು ಅನುಭವಿಸುದರೊಂದಿಗೆ ದೇಶದ ಬಿಲ್ಲುಗಾರರು ಬರಿಗೈಯಲ್ಲಿ ಮರಳಿದ್ದರು.</p>.<p>ಪುರುಷರ ವೈಯಕ್ತಿಕ ವಿಭಾಗದ ಪ್ರೀ-ಕ್ವಾರ್ಟರ್ಫೈನಲ್ನಲ್ಲಿ ಅತನು ದಾಸ್ ಜಪಾನ್ನ ತಕಹರು ಪುರುಕಾವ ವಿರುದ್ಧ 4-6ರಲ್ಲಿ ಸೋಲು ಅನುಭವಿಸಿದರು.</p>.<p>ಈ ಮೂಲಕ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪ್ರೀ-ಕ್ವಾರ್ಟರ್ಫೈನಲ್ನಲ್ಲಿ ಸೋಲು ಎದುರಾಗಿದೆ.</p>.<p>ಅತನು ದಾಸ್ ಅವರ ಪತ್ನಿ ದೀಪಿಕಾ ಕುಮಾರಿ, ಸತತ ಮೂರನೇ ಬಾರಿಯೂ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಲಾಗದೇ ವಾಪಸ್ ಆಗಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದ ಎಂಟರ ಘಟ್ಟದಲ್ಲಿ ದೀಪಿಕಾ, ದಕ್ಷಿಣ ಕೊರಿಯಾದ ಎನ್ ಸ್ಯಾನ್ ವಿರುದ್ದ 0-6ರ ಅಂತರದಲ್ಲಿ ಪರಾಭವಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>