<p><strong>ಬೆಂಗಳೂರು:</strong> ಕರ್ನಾಟಕದ ಟೇಬಲ್ ಟೆನಿಸ್ನ ದಿಗ್ಗಜ ಆಟಗಾರ್ತಿ ಎನಿಸಿಕೊಂಡಿದ್ದ ಉಷಾ ಸುಂದರ್ರಾಜ್ (80) ಸೋಮವಾರ ವಯೋಸಹಜ ಅನಾರೋಗ್ಯದ ಕಾರಣ ನಿಧನರಾದರು. ಅವಿವಾಹಿತರಾಗಿದ್ದ ಅವರು ಸಹೋದರಿಯರ ಜತೆ ವಾಸವಿದ್ದರು.</p>.<p>ಮಹಿಳಾ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ಕರ್ನಾಟಕದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. ಅವರು ಒಟ್ಟು ಐದು ಬಾರಿ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಕರ್ನಾಟಕದ ಬೇರೆ ಯಾರೂ ಈ ಸಾಧನೆ ಮಾಡಿಲ್ಲ.</p>.<p>1966 ರಲ್ಲಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1968 ರಲ್ಲಿ ಕೊನೆಯದಾಗಿ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಆಡಿದ್ದರು.</p>.<p>ಉಷಾ ಸುಂದರ್ರಾಜ್ ಅವರು ಕೊನೆಯ ಬಾರಿ ರಾಷ್ಟ್ರೀಯ ಚಾಂಪಿಯನ್ ಆದ ಬಳಿಕ ಸುಮಾರು 50 ವರ್ಷಗಳ ಕಾಲ ಕರ್ನಾಟಕ ಪ್ರಶಸ್ತಿ ಬರ ಎದುರಿಸಿತ್ತು. 2019ರಲ್ಲಿ ಅರ್ಚನಾ ಕಾಮತ್ ಅವರು ಗೆದ್ದು ಬರ ನೀಗಿಸಿದ್ದರು.</p>.<p>ಉಷಾ, ಮಲ್ಲೇಶ್ವರಂ ಸಂಸ್ಥೆಯ ಅಂಗಣದಿಂದ ಕ್ರೀಡಾ ಪಯಣ ಆರಂಭಿಸಿದ್ದರು. ಆ ಸಂದರ್ಭದಲ್ಲಿ ಮಹಿಳಾ ಆಟಗಾರ್ತಿಯರು ಇಲ್ಲದ ಕಾರಣ ಹಲವು ವರ್ಷಗಳ ಅವಧಿಗೆ ಪುರುಷ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿದ್ದರು. ಅವರ ಆಟದಲ್ಲಿ ಹೆಚ್ಚು ರಕ್ಷಣಾತ್ಮಕ ಕೌಶಲಗಳ ಬಳಕೆಯಿತ್ತು.</p>.<p>ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿ ನಲ್ಲಿ ಉದ್ಯೋಗದಲ್ಲಿದ್ದ ಅವರು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಆಗಿ ನಿವೃತ್ತಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕದ ಟೇಬಲ್ ಟೆನಿಸ್ನ ದಿಗ್ಗಜ ಆಟಗಾರ್ತಿ ಎನಿಸಿಕೊಂಡಿದ್ದ ಉಷಾ ಸುಂದರ್ರಾಜ್ (80) ಸೋಮವಾರ ವಯೋಸಹಜ ಅನಾರೋಗ್ಯದ ಕಾರಣ ನಿಧನರಾದರು. ಅವಿವಾಹಿತರಾಗಿದ್ದ ಅವರು ಸಹೋದರಿಯರ ಜತೆ ವಾಸವಿದ್ದರು.</p>.<p>ಮಹಿಳಾ ವಿಭಾಗದಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ಕರ್ನಾಟಕದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು. ಅವರು ಒಟ್ಟು ಐದು ಬಾರಿ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಪ್ರಶಸ್ತಿ ಜಯಿಸಿದ್ದಾರೆ. ಕರ್ನಾಟಕದ ಬೇರೆ ಯಾರೂ ಈ ಸಾಧನೆ ಮಾಡಿಲ್ಲ.</p>.<p>1966 ರಲ್ಲಿ ಅವರಿಗೆ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1968 ರಲ್ಲಿ ಕೊನೆಯದಾಗಿ ರಾಷ್ಟ್ರೀಯ ಚಾಂಪಿಯನ್ಷಿಪ್ನಲ್ಲಿ ಆಡಿದ್ದರು.</p>.<p>ಉಷಾ ಸುಂದರ್ರಾಜ್ ಅವರು ಕೊನೆಯ ಬಾರಿ ರಾಷ್ಟ್ರೀಯ ಚಾಂಪಿಯನ್ ಆದ ಬಳಿಕ ಸುಮಾರು 50 ವರ್ಷಗಳ ಕಾಲ ಕರ್ನಾಟಕ ಪ್ರಶಸ್ತಿ ಬರ ಎದುರಿಸಿತ್ತು. 2019ರಲ್ಲಿ ಅರ್ಚನಾ ಕಾಮತ್ ಅವರು ಗೆದ್ದು ಬರ ನೀಗಿಸಿದ್ದರು.</p>.<p>ಉಷಾ, ಮಲ್ಲೇಶ್ವರಂ ಸಂಸ್ಥೆಯ ಅಂಗಣದಿಂದ ಕ್ರೀಡಾ ಪಯಣ ಆರಂಭಿಸಿದ್ದರು. ಆ ಸಂದರ್ಭದಲ್ಲಿ ಮಹಿಳಾ ಆಟಗಾರ್ತಿಯರು ಇಲ್ಲದ ಕಾರಣ ಹಲವು ವರ್ಷಗಳ ಅವಧಿಗೆ ಪುರುಷ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿದ್ದರು. ಅವರ ಆಟದಲ್ಲಿ ಹೆಚ್ಚು ರಕ್ಷಣಾತ್ಮಕ ಕೌಶಲಗಳ ಬಳಕೆಯಿತ್ತು.</p>.<p>ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿ ನಲ್ಲಿ ಉದ್ಯೋಗದಲ್ಲಿದ್ದ ಅವರು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಆಗಿ ನಿವೃತ್ತಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>