ನವದೆಹಲಿ: ಒಲಿಂಪಿಯನ್ ಮಣಿಕಾ ಬಾತ್ರಾ ಅವರು ರಾಷ್ಟ್ರೀಯ ತಂಡದ ಕೋಚ್ ಸೌಮ್ಯದೀಪ್ ರಾಯ್ ಅವರ ಮೇಲೆ ಮಾಡಿರುವ ಪಂದ್ಯ ಫಿಕ್ಸಿಂಗ್ ಆರೋಪದ ವಿಚಾರಣೆಗಾಗಿ ಶನಿವಾರ ಭಾರತ ಟೇಬಲ್ ಟೆನಿಸ್ ಫೆಡರೇಷನ್ (ಟಿಟಿಎಫ್ಐ) ಕಾರ್ಯನಿರ್ವಾಹಕ ಸಮಿತಿ ಸಭೆ ನಡೆಯಲಿದೆ.
ಮಣಿಕಾ ಅವರು ದೂರು ಕೊಟ್ಟ ನಂತರ ರಾಯ್ ಅವರಿಗೆ ಟಿಟಿಎಫ್ಐ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
‘ವರ್ಚುವಲ್ ಸಭೆಯಲ್ಲಿ ವಿಷಯವನ್ನು ಚರ್ಚಿಸಲಾಗುವುದು. ವಿಚಾರಣೆ ಸಮಿತಿಯು ಕೂಲಂಕಷವಾಗಿ ಪರಿಶೀಲಿಸಿ ತೀರ್ಮಾನ ನೀಡಲಿದೆ’ ಎಂದು ಟಿಟಿಎಫ್ಐ ಕಾರ್ಯದರ್ಶಿ ಅರುಣ್ ಬ್ಯಾನರ್ಜಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.