ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್‌: ಎಲ್‌ಐಸಿಗೆ ಜಯ

Last Updated 22 ಡಿಸೆಂಬರ್ 2018, 19:55 IST
ಅಕ್ಷರ ಗಾತ್ರ

ಬೆಂಗಳೂರು: ನಕುಲ್ ಮತ್ತು ವಿಕ್ರಂ ಅವರ ಪರಿಣಾಮಕಾರಿ ಆಟದ ಬಲದಿಂದ ಎಲ್‌ಐಸಿ ತಂಡ ಇಲ್ಲಿ ನಡೆಯುತ್ತಿರುವ ವಾಜಪೇಯಿ ಕಪ್‌ ರಾಜ್ಯ ವಾಲಿಬಾಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿತು.

ಶಂಕರ ಮಠ ಸಮೀಪದ ವಿವೇಕಾನಂದ ಕ್ರೀಡಾಂಗಣದಲ್ಲಿ ರಾಜಾಜಿನಗರ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಆಯೋಜಿಸಿರುವ ಟೂರ್ನಿಯ ಮೊದಲ ದಿನವಾದ ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಈ ತಂಡ ಎಎಸ್‌ಸಿಯನ್ನು 3–2 ಸೆಟ್‌ಗಳಿಂದ ಮಣಿಸಿತು.

ಮೊದಲ ಎರಡು ಸೆಟ್‌ಗಳಲ್ಲಿ 16–25, 16–25ರಿಂದ ಸೋತರೂ ಚೇತರಿಸಿಕೊಂಡು ಎಲ್‌ಐಸಿ ತಂಡ ಆಕ್ರಮಣಕಾರಿ ಆಟದ ಮೂಲಕ ಎದುರಾಳಿಗಳನ್ನು ಕಂಗೆಡಿಸಿತು. 25–22, 26–24 ಹಾಗೂ 15–12ರಿಂದ ಗೆದ್ದು ಸಂಭ್ರಮಿಸಿತು.

ಸುನಿಲ್ ಮತ್ತು ಅಶ್ವಿನ್ ರಾಜ್‌ ಉತ್ತಮ ಆಟವಾಡಿದರೂ ಎಎಸ್‌ಸಿ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗದೇ ನಿರಾಸೆಗೆ ಒಳಗಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT