ಬೆಂಗಳೂರು:ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆದ ‘ರಾಜ್ಯಮಟ್ಟದ ಅಂತರ್ ಶಾಲಾ ಕೌನ್ಸಿಲರ್ ಕಪ್’ ವಾಲಿಬಾಲ್ ಕ್ರೀಡಾಕೂಟದಲ್ಲಿ ಬೆಂಗಳೂರು ಉತ್ತರ ವಿಭಾಗದ ಸೇಂಟ್ ಕ್ಲಾರೆನ್ಸ್ ಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡಗಳುಚಾಂಪಿಯನ್ ಆಗಿ ಹೊರ ಹೊಮ್ಮಿದವು.
ಸ್ಪರ್ಧೆಯಲ್ಲಿ140 ಶಾಲೆಗಳ ತಂಡಗಳು ಭಾಗವಹಿಸಿದ್ದವು.ಚಿಕ್ಕಮಕ್ಕಳ ವಿಭಾಗದಲ್ಲಿ ಶಾರದಾ ಹೈಯರ್ ಪ್ರೈಮರಿ ಶಾಲೆ ಹಾಗೂ ಆರಾಧನಾ ಶಾಲೆಗಳು ಪ್ರಶಸ್ತಿ ಪಡೆದವು.
ಪಾಲಿಕೆ ಸದಸ್ಯ ಎನ್.ನಾಗರಾಜ್ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.