ಹೋದ ವಾರ ರೇಸ್ನ ಮೊದಲ ಸ್ಪರ್ಧೆಯಲ್ಲಿ ಕುದುರೆಯೊಂದು ಜಾರಿ ಬಿದ್ದು ಕಾಲು ಮುರಿದುಕೊಂಡಿತು. ಅದರ ಹಿಂದೆ ಇದ್ದ ಎರಡೂ ಕುದು ರೆಗಳೂ ಆಯ ತಪ್ಪಿದ್ದವು. ಫೆವರಿಟ್ ಅಲ್ಲದ ಕುದುರೆಗಳು ಗಮ್ಯ ತಲುಪಿ ವಿಜಯಿಯಾಗಿದ್ದವು. ರೇಸ್ ರದ್ದು ಮಾಡದ ಬಿಟಿಸಿಯ ವಿರುದ್ಧ ಆಕ್ರೋಶ ಗೊಂಡ ಪಂಟರ್ಗಳು ಉಗ್ರ ಪ್ರತಿಭಟನೆ ಮಾಡಿದ್ದರು. ಇದರಿಂದಾಗಿ ಹೋದ ಶುಕ್ರವಾರ ಮತ್ತು ಶನಿವಾರದ ರೇಸ್ ಗಳನ್ನು ರದ್ದುಪಡಿಸಲಾಗಿತ್ತು. ಟ್ರ್ಯಾಕ್ ಗುಣಮಟ್ಟ ಸರಿಯಿಲ್ಲ ಎಂದು ಜಾಕಿಗಳು ದೂರಿದ್ದರು.