ಈಚೆಗೆ ಜಮ್ಮು–ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿರುವ ಭಾರತ ಸರ್ಕಾರವು 370ನೇ ವಿಧಿಯ ವಿಶೇಷಾಧಿಕಾರ ರದ್ದುಗೊಳಿಸಿತ್ತು. ಅದನ್ನು ಪ್ರತಿಭಟಿಸಿರುವ ಪಾಕ್ ಸರ್ಕಾರವು ಭಾರತದೊಂದಿಗೆ ಎಲ್ಲ ವಾಣಿಜ್ಯ ವ್ಯವಹಾರಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತ್ತು. ಅಲ್ಲದೇ ಪಾಕ್ನಲ್ಲಿರುವ ಭಾರತೀಯ ರಾಯಭಾರಿಯನ್ನು ಕೂಡ ಮರಳಿ ಹೋಗುವಂತೆ ಸೂಚಿಸಿತ್ತು. ಇದರಿಂದಾಗಿ ಪರಿಸ್ಥಿತಿಯು ತುಸು ಉದ್ವಿಗ್ನಗೊಂಡಿದೆ. ಈ ಸಂದರ್ಭದಲ್ಲಿ ಉಭಯ ದೇಶಗಳ ತಂಡದ ಪಂದ್ಯವು ಇಸ್ಲಾಮಾಬಾದ್ನಲ್ಲಿ ನಡೆಯುವುದು ಕಷ್ಟ ಎಂದು ಭಾರತ ಟೆನಿಸ್ ಫೆಡರೇಷನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.