ನವದೆಹಲಿ: ಕೇಂದ್ರ ಸಚಿವರಾಗಿರುವ ಟಿಡಿಪಿಯ ಇಬ್ಬರು ಸಂಸದರು ಗುರುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗರಿಕ ವಿಮಾನಯಾನ ಸಚಿವರಾದ ಟಿಡಿಪಿಯ ಅಶೋಕ್ ಗಜಪತಿ ರಾಜು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ವೈ.ಎಸ್. ಚೌಧರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಆಂಧ್ರಪ್ರದೇಶವನ್ನು ಕಡೆಗಣಿಸಿದ ಸಂಬಂಧ ಟಿಡಿಪಿ (ತೆಲುಗು ದೇಶಂ ಪಾರ್ಟಿ) ಮತ್ತು ಬಿಜೆಪಿ ನಡುವೆ ವಿರಸ ಹೆಚ್ಚುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಚಿವರಿಗೆ ರಾಜೀನಾಮೆ ನೀಡುವಂತೆ ಬುಧವಾರ ಸೂಚಿಸಿದ್ದರು.
Aviation Minister and TDP MP Ashok Gajapathi Raju's resignation letter to PM Narendra Modi pic.twitter.com/DXFbagSzWs