<p><strong>ಬೆಂಗಳೂರು</strong>: ಕಬ್ಬನ್ ಪಾರ್ಕ್ನ ಎಸ್.ಎಂ. ಕೃಷ್ಣ ಟೆನಿಸ್ ಕ್ರೀಡಾಂಗಣದಲ್ಲಿ ಸೋಮವಾರ ‘ಎಸ್.ಎಂ. ಕೃಷ್ಣ ಸ್ಮರಣಾರ್ಥ ಓಪನ್’ ಎಟಿಪಿ ಚಾಲೆಂಜರ್ನ ಮುಖ್ಯಸುತ್ತಿನ ಮೊದಲ ದಿನದ ಪಂದ್ಯಗಳಿಗೆ ಮಳೆಯಿಂದಾಗಿ ಅಡಚಣೆ ಉಂಟಾಯಿತು. ಐದು ಸಿಂಗಲ್ಸ್ ಮತ್ತು ಒಂದು ಡಬಲ್ಸ್ ಪಂದ್ಯಗಳನ್ನು ರದ್ದುಗೊಳಿಸಲಾಯಿತು.</p>.<p>ಪುರುಷರ ಸಿಂಗಲ್ಸ್ನ 32ರ ಘಟ್ಟದ ಪಂದ್ಯದಲ್ಲಿ ಭಾರತದ ಕರಣ್ ಸಿಂಗ್ ನಿರ್ಣಾಯಕ ಹೋರಾಟದಲ್ಲಿ ತೊಡಗಿದ್ದರು. ಮಳೆಯಿಂದಾಗಿ ಆಟವನ್ನುಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು. ಈ ವೇಳೆಗೆ ಏಳನೇ ಶ್ರೇಯಾಂಕದ ಕರಣ್ 5–5 (30–0) ರಿಂದ ಮಲೇಷ್ಯಾದ ಮಿತ್ಸುಕಿ ವೀ ಕಾಂಗ್ ಲಿಯಾಂಗ್ ವಿರುದ್ಧ ಸಮಬಲದ ಹೋರಾಟ ನಡೆಸಿದ್ದರು.</p>.<p>ಇದಕ್ಕೂ ಮೊದಲು 17 ವರ್ಷದ ಆರಾಧ್ಯ ಕ್ಷಿತಿಜ್ ತಮ್ಮ ಗೆಲುವಿನ ಓಟವನ್ನು ಮುಂದುವರಿಸಿ ಮುಖ್ಯ ಸುತ್ತಿಗೆ ಪ್ರವೇಶಿಸಿದರು. ವೈಲ್ಡ್ಕಾರ್ಡ್ ಪ್ರವೇಶ ಪಡೆದ ಬೆಂಗಳೂರಿನ ಈ ಆಟಗಾರ 7-6 (2), 6-4ರಿಂದ ನಿತಿನ್ ಕುಮಾರ್ ಸಿನ್ಹಾ ಅವರನ್ನು ಸೋಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-51-588011904</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಬ್ಬನ್ ಪಾರ್ಕ್ನ ಎಸ್.ಎಂ. ಕೃಷ್ಣ ಟೆನಿಸ್ ಕ್ರೀಡಾಂಗಣದಲ್ಲಿ ಸೋಮವಾರ ‘ಎಸ್.ಎಂ. ಕೃಷ್ಣ ಸ್ಮರಣಾರ್ಥ ಓಪನ್’ ಎಟಿಪಿ ಚಾಲೆಂಜರ್ನ ಮುಖ್ಯಸುತ್ತಿನ ಮೊದಲ ದಿನದ ಪಂದ್ಯಗಳಿಗೆ ಮಳೆಯಿಂದಾಗಿ ಅಡಚಣೆ ಉಂಟಾಯಿತು. ಐದು ಸಿಂಗಲ್ಸ್ ಮತ್ತು ಒಂದು ಡಬಲ್ಸ್ ಪಂದ್ಯಗಳನ್ನು ರದ್ದುಗೊಳಿಸಲಾಯಿತು.</p>.<p>ಪುರುಷರ ಸಿಂಗಲ್ಸ್ನ 32ರ ಘಟ್ಟದ ಪಂದ್ಯದಲ್ಲಿ ಭಾರತದ ಕರಣ್ ಸಿಂಗ್ ನಿರ್ಣಾಯಕ ಹೋರಾಟದಲ್ಲಿ ತೊಡಗಿದ್ದರು. ಮಳೆಯಿಂದಾಗಿ ಆಟವನ್ನುಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು. ಈ ವೇಳೆಗೆ ಏಳನೇ ಶ್ರೇಯಾಂಕದ ಕರಣ್ 5–5 (30–0) ರಿಂದ ಮಲೇಷ್ಯಾದ ಮಿತ್ಸುಕಿ ವೀ ಕಾಂಗ್ ಲಿಯಾಂಗ್ ವಿರುದ್ಧ ಸಮಬಲದ ಹೋರಾಟ ನಡೆಸಿದ್ದರು.</p>.<p>ಇದಕ್ಕೂ ಮೊದಲು 17 ವರ್ಷದ ಆರಾಧ್ಯ ಕ್ಷಿತಿಜ್ ತಮ್ಮ ಗೆಲುವಿನ ಓಟವನ್ನು ಮುಂದುವರಿಸಿ ಮುಖ್ಯ ಸುತ್ತಿಗೆ ಪ್ರವೇಶಿಸಿದರು. ವೈಲ್ಡ್ಕಾರ್ಡ್ ಪ್ರವೇಶ ಪಡೆದ ಬೆಂಗಳೂರಿನ ಈ ಆಟಗಾರ 7-6 (2), 6-4ರಿಂದ ನಿತಿನ್ ಕುಮಾರ್ ಸಿನ್ಹಾ ಅವರನ್ನು ಸೋಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-51-588011904</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>