<p><strong>ಬೆಂಗಳೂರು:</strong> ಹಾಲಿ ರಾಷ್ಟ್ರೀಯ ಚಾಂಪಿಯನ್ ನಿಕಿ ಪೂಣಚ್ಚ ಮತ್ತು ಪುಣೆಯ ಅರ್ಜುನ್ ಖಾಡೆ ಅವರು ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಗೆ ‘ವೈಲ್ಡ್ ಕಾರ್ಡ್’ ಅರ್ಹತೆ ಗಳಿಸಿದ್ದಾರೆ.</p>.<p>ಟೂರ್ನಿಯು ಕಬ್ಬನ್ ಉದ್ಯಾನದಲ್ಲಿರುವ ಕೆಎಸ್ಎಲ್ಟಿಎ ಅಂಗಳದಲ್ಲಿ ಸೋಮವಾರದಿಂದ ಆರಂಭವಾಗಲಿದೆ.</p>.<p>24 ವರ್ಷದ ನಿಕಿ ಮತ್ತು ವಿಶ್ವ ರ್ಯಾಂಕಿಂಗ್ನಲ್ಲಿ 219ನೇ ಸ್ಥಾನದಲ್ಲಿರುವ ಅರ್ಜುನ್ ಅವರು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಣಕ್ಕಿಳಿಯಲಿದ್ದಾರೆ.</p>.<p>‘ಬೆಂಗಳೂರು ಓಪನ್ಗೆ ‘ವೈಲ್ಡ್ ಕಾರ್ಡ್’ ಅರ್ಹತೆ ಸಿಕ್ಕಿರುವುದರಿಂದ ಅತೀವ ಖುಷಿಯಾಗಿದೆ. ತವರಿನ ಅಂಗಳದಲ್ಲಿ ಆಡಲು ಉತ್ಸುಕನಾಗಿದ್ದು, ಪ್ರಶಸ್ತಿ ಜಯಿಸಲು ಪ್ರಯತ್ನಿಸುತ್ತೇನೆ’ ಎಂದು ನಿಕಿ ತಿಳಿಸಿದ್ದಾರೆ.</p>.<p>‘ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಠ ಆಟಗಾರರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಸ್ಪರ್ಧೆಯೂ ಕಠಿಣವಾಗಿರಲಿದೆ. ನಿಕಿ ಮತ್ತು ಅರ್ಜುನ್ ಪ್ರತಿಭಾನ್ವಿತ ಆಟಗಾರರು. ಹೀಗಾಗಿ ಅವರಿಗೆ ‘ವೈಲ್ಡ್ ಕಾರ್ಡ್’ ಅರ್ಹತೆ ನೀಡಿದ್ದೇವೆ’ ಎಂದು ಟೂರ್ನಿಯ ನಿರ್ದೇಶಕ ಸುನೀಲ್ ಯಜಮಾನ್ ಹೇಳಿದ್ದಾರೆ.</p>.<p>ಭಾರತದ ಪ್ರಜ್ಞೇಶ್ ಗುಣೇಶ್ವರನ್, ಶಶಿಕುಮಾರ್ ಮುಕುಂದ್, ಸುಮಿತ್ ನಗಾಲ್ ಮತ್ತು ರಾಮಕುಮಾರ್ ರಾಮನಾಥನ್ ಅವರೂ ಸಿಂಗಲ್ಸ್ ವಿಭಾಗದಲ್ಲಿ ಕಣದಲ್ಲಿದ್ದಾರೆ. ಇವರು ಮುಖ್ಯ ಸುತ್ತಿಗೆ ನೇರ ಅರ್ಹತೆ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಲಿ ರಾಷ್ಟ್ರೀಯ ಚಾಂಪಿಯನ್ ನಿಕಿ ಪೂಣಚ್ಚ ಮತ್ತು ಪುಣೆಯ ಅರ್ಜುನ್ ಖಾಡೆ ಅವರು ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಗೆ ‘ವೈಲ್ಡ್ ಕಾರ್ಡ್’ ಅರ್ಹತೆ ಗಳಿಸಿದ್ದಾರೆ.</p>.<p>ಟೂರ್ನಿಯು ಕಬ್ಬನ್ ಉದ್ಯಾನದಲ್ಲಿರುವ ಕೆಎಸ್ಎಲ್ಟಿಎ ಅಂಗಳದಲ್ಲಿ ಸೋಮವಾರದಿಂದ ಆರಂಭವಾಗಲಿದೆ.</p>.<p>24 ವರ್ಷದ ನಿಕಿ ಮತ್ತು ವಿಶ್ವ ರ್ಯಾಂಕಿಂಗ್ನಲ್ಲಿ 219ನೇ ಸ್ಥಾನದಲ್ಲಿರುವ ಅರ್ಜುನ್ ಅವರು ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಣಕ್ಕಿಳಿಯಲಿದ್ದಾರೆ.</p>.<p>‘ಬೆಂಗಳೂರು ಓಪನ್ಗೆ ‘ವೈಲ್ಡ್ ಕಾರ್ಡ್’ ಅರ್ಹತೆ ಸಿಕ್ಕಿರುವುದರಿಂದ ಅತೀವ ಖುಷಿಯಾಗಿದೆ. ತವರಿನ ಅಂಗಳದಲ್ಲಿ ಆಡಲು ಉತ್ಸುಕನಾಗಿದ್ದು, ಪ್ರಶಸ್ತಿ ಜಯಿಸಲು ಪ್ರಯತ್ನಿಸುತ್ತೇನೆ’ ಎಂದು ನಿಕಿ ತಿಳಿಸಿದ್ದಾರೆ.</p>.<p>‘ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಠ ಆಟಗಾರರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಸ್ಪರ್ಧೆಯೂ ಕಠಿಣವಾಗಿರಲಿದೆ. ನಿಕಿ ಮತ್ತು ಅರ್ಜುನ್ ಪ್ರತಿಭಾನ್ವಿತ ಆಟಗಾರರು. ಹೀಗಾಗಿ ಅವರಿಗೆ ‘ವೈಲ್ಡ್ ಕಾರ್ಡ್’ ಅರ್ಹತೆ ನೀಡಿದ್ದೇವೆ’ ಎಂದು ಟೂರ್ನಿಯ ನಿರ್ದೇಶಕ ಸುನೀಲ್ ಯಜಮಾನ್ ಹೇಳಿದ್ದಾರೆ.</p>.<p>ಭಾರತದ ಪ್ರಜ್ಞೇಶ್ ಗುಣೇಶ್ವರನ್, ಶಶಿಕುಮಾರ್ ಮುಕುಂದ್, ಸುಮಿತ್ ನಗಾಲ್ ಮತ್ತು ರಾಮಕುಮಾರ್ ರಾಮನಾಥನ್ ಅವರೂ ಸಿಂಗಲ್ಸ್ ವಿಭಾಗದಲ್ಲಿ ಕಣದಲ್ಲಿದ್ದಾರೆ. ಇವರು ಮುಖ್ಯ ಸುತ್ತಿಗೆ ನೇರ ಅರ್ಹತೆ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>