ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದಾ ಕೊಚ್ಚರ್‌ ಭಾವ ರಾಜೀವ್‌ ಸಿಬಿಐ ವಶಕ್ಕೆ

Last Updated 5 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮುಂಬೈ : ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಸಿಇಒ ಚಂದಾ ಕೊಚ್ಚರ್‌ ಅವರ ಭಾವ ರಾಜೀವ್‌ ಕೊಚ್ಚರ್‌ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.

ಸಿಂಗಪುರದ ಹಣಕಾಸು ಸೇವಾ ಸಂಸ್ಥೆ ಅವಿಸ್ತಾ ಅಡ್ವೈಸರಿಯ ಸ್ಥಾಪಕ ಮತ್ತು ಸಿಇಒ ಆಗಿರುವ ರಾಜೀವ್‌ ಕೊಚ್ಚರ್‌ ಅವರ ವಿರುದ್ಧ ಸಿಬಿಐ ಲುಕ್‌ಔಟ್‌ ಸುತ್ತೋಲೆ ಹೊರಡಿಸಿತ್ತು.

ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ರಾಜೀವ್‌ ಅವರನ್ನು ವಶಕ್ಕೆ ಪಡೆದಿರುವ ಸಿಬಿಐ ವಿಚಾರಣೆಗೆ ಒಳಪಡಿಸಿದೆ.

ಸಂಸ್ಥೆಯು 5 ವರ್ಷಗಳಿಂದ  ಐಸಿಐಸಿಐ ಬ್ಯಾಂಕ್‌ನಿಂದ ವಿದೇಶಿ ಕರೆನ್ಸಿ ರೂಪದಲ್ಲಿ ಸಾಲ ಪಡೆದ 7 ಸಂಸ್ಥೆಗಳಿಗೆ ಹಣಕಾಸು ಸಲಹೆ ನೀಡುತ್ತಿತ್ತು. ಸಾಲ ನೀಡಿಕೆಯಲ್ಲಿನ ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿದಮತೆ ಚಂದಾ ಕೊಚ್ಚರ್‌ ಮತ್ತು ಅವರ ಪತಿ ದೀಪಕ್‌ ಕೊಚ್ಚರ್‌ ಅವರನ್ನೂ ಸಿಬಿಐ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT