ಬೆಂಗಳೂರು: ಕರ್ನಾಟಕದ ಬಿ.ಆರ್.ನಿಕ್ಷೇಪ್, ದೆಹಲಿಯಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ.
ಸೋಮವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಹಣಾಹಣಿಯಲ್ಲಿ ನಿಕ್ಷೇಪ್ 6–3, 6–7, 6–4ರಲ್ಲಿ ಅಲೆಕ್ಸ್ ಸೋಲಂಕಿ ಅವರನ್ನು ಪರಾಭವಗೊಳಿಸಿದರು.
ಮೊದಲ ಸೆಟ್ನಲ್ಲಿ ನಿರಾಯಾಸವಾಗಿ ಗೆದ್ದ ನಿಕ್ಷೇಪ್, ರೋಚಕ ಹೋರಾಟ ಕಂಡುಬಂದ ಎರಡನೇ ಸೆಟ್ನಲ್ಲಿ ಎಡವಿದರು. ಹೀಗಾಗಿ 1–1 ಸಮಬಲ ಕಂಡುಬಂತು. ನಿರ್ಣಾಯಕ ಎನಿಸಿದ್ದ ಮೂರನೇ ಸೆಟ್ನಲ್ಲಿ ಮಿಂಚಿದ ಕರ್ನಾಟಕದ ಆಟಗಾರ ಗೆಲುವಿನ ತೋರಣ ಕಟ್ಟಿದರು.