ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಿಕೆಟ್ ಆಟಗಾರರ ಮೇಲೆ ಹೇರಿದ್ದ ನಿಷೇಧವನ್ನು ಶ್ರೀಲಂಕಾ ಶುಕ್ರವಾರ ವಾಪಸ್ ತೆಗೆದುಕೊಂಡಿದೆ. ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ನಿಯಮ ಉಲ್ಲಂಘಿಸಿದ್ದ ಉಪನಾಯಕ ಕುಶಾಲ್ ಮೆಂಡಿಸ್, ಆರಂಭಿಕ ಬ್ಯಾಟರ್ ಧನುಷ್ಕ ಗುಣತಿಲಕ ಹಾಗೂ ವಿಕೆಟ್ ಕೀಪರ್ ನಿರೋಷನ್ ಡಿಕ್ವೆಲ್ಲಾ ಮೇಲೆ ಒಂದು ವರ್ಷ ನಿಷೇಧ ಹೇರಲಾಗಿತ್ತು. ಇದೀಗ ಆರೇ ತಿಂಗಳಲ್ಲಿ ಅದನ್ನು ತೆರವುಗೊಳಿಸಲಾಗಿದೆ. ಜಿಂಬಾಬ್ವೆ ಎದುರಿನ ಏಕದಿನ ಸರಣಿಗಾಗಿ ತಂಡದ ಆಯ್ಕೆಗೆ ಈ ಮೂವರು ಲಭ್ಯ ಇರುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.