<p><strong>ನವದೆಹಲಿ (ಪಿಟಿಐ): </strong>ಭಾರತದ ಯುವ ಆಟಗಾರ ಶಶಿಕುಮಾರ್ ಮುಕುಂದ್ ಅವರು ಇದೇ ತಿಂಗಳ 29 ಮತ್ತು 30ರಂದು ಕಜಕಸ್ತಾನದ ನೂರ್ ಸುಲ್ತಾನ್ನಲ್ಲಿ ನಡೆಯಲಿರುವ ಪಾಕಿಸ್ತಾನ ಎದುರಿನ ಡೇವಿಸ್ ಕಪ್ ಟೆನಿಸ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.</p>.<p>ಪಾಕ್ ಎದುರಿನ ಪಂದ್ಯಕ್ಕೆ ಪ್ರಕಟಿಸಲಾಗಿದ್ದ ಭಾರತ ತಂಡದಲ್ಲಿ ಶಶಿಕುಮಾರ್ ಅವರು ಕಾಯ್ದಿರಿಸಿದ ಆಟಗಾರನಾಗಿ ಸ್ಥಾನ ಪಡೆದಿದ್ದರು.</p>.<p>‘ಪೋರ್ಚುಗಲ್ನಲ್ಲಿ ನಡೆದ ಟೂರ್ನಿಯೊಂದರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಪುರವ ರಾಜಾ ಜೊತೆಗೂಡಿ ಆಡುವ ವೇಳೆ ಶಶಿಕುಮಾರ್ ಅವರ ಪಾದಕ್ಕೆ ಗಾಯವಾಗಿದೆ. ಹೀಗಾಗಿ ಪಾಕ್ ಎದುರಿನ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಈ ವಿಷಯವನ್ನು ನಮ್ಮ ಗಮನಕ್ಕೂ ತಂದಿದ್ದಾರೆ’ ಎಂದು ಭಾರತ ತಂಡದ ಕೋಚ್ ಜೀಶನ್ ಅಲಿ ಹೇಳಿದ್ದಾರೆ.</p>.<p>‘ಶಶಿಕುಮಾರ್ ಬದಲು ಎನ್.ಶ್ರೀರಾಮ್ ಬಾಲಾಜಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದುಕೊಂಡಿದ್ದೇವೆ. ಆದರೆ ಅವರಿಗೆ ಕಜಕಸ್ತಾನದ ವೀಸಾ ಸಿಗುವುದು ಕಷ್ಟವಾಗಬಹುದು’ ಎಂದೂ ಅವರು ತಿಳಿಸಿದ್ದಾರೆ.</p>.<p>ದೆಹಲಿ ಲಾನ್ ಟೆನಿಸ್ ಸಂಸ್ಥೆಯ (ಡಿಎಲ್ಟಿಎ) ಅಂಗಳದಲ್ಲಿ ಭಾರತ ಡೇವಿಸ್ ಕಪ್ ತಂಡದ ಆಟಗಾರರು ಗುರುವಾರದಿಂದ ಅಭ್ಯಾಸ ನಡೆಸುತ್ತಿದ್ದು ಇದರಲ್ಲಿ ಶ್ರೀರಾಮ್ ಕೂಡಾ ಭಾಗವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭಾರತದ ಯುವ ಆಟಗಾರ ಶಶಿಕುಮಾರ್ ಮುಕುಂದ್ ಅವರು ಇದೇ ತಿಂಗಳ 29 ಮತ್ತು 30ರಂದು ಕಜಕಸ್ತಾನದ ನೂರ್ ಸುಲ್ತಾನ್ನಲ್ಲಿ ನಡೆಯಲಿರುವ ಪಾಕಿಸ್ತಾನ ಎದುರಿನ ಡೇವಿಸ್ ಕಪ್ ಟೆನಿಸ್ ಪಂದ್ಯದಿಂದ ಹಿಂದೆ ಸರಿದಿದ್ದಾರೆ.</p>.<p>ಪಾಕ್ ಎದುರಿನ ಪಂದ್ಯಕ್ಕೆ ಪ್ರಕಟಿಸಲಾಗಿದ್ದ ಭಾರತ ತಂಡದಲ್ಲಿ ಶಶಿಕುಮಾರ್ ಅವರು ಕಾಯ್ದಿರಿಸಿದ ಆಟಗಾರನಾಗಿ ಸ್ಥಾನ ಪಡೆದಿದ್ದರು.</p>.<p>‘ಪೋರ್ಚುಗಲ್ನಲ್ಲಿ ನಡೆದ ಟೂರ್ನಿಯೊಂದರ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಪುರವ ರಾಜಾ ಜೊತೆಗೂಡಿ ಆಡುವ ವೇಳೆ ಶಶಿಕುಮಾರ್ ಅವರ ಪಾದಕ್ಕೆ ಗಾಯವಾಗಿದೆ. ಹೀಗಾಗಿ ಪಾಕ್ ಎದುರಿನ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಈ ವಿಷಯವನ್ನು ನಮ್ಮ ಗಮನಕ್ಕೂ ತಂದಿದ್ದಾರೆ’ ಎಂದು ಭಾರತ ತಂಡದ ಕೋಚ್ ಜೀಶನ್ ಅಲಿ ಹೇಳಿದ್ದಾರೆ.</p>.<p>‘ಶಶಿಕುಮಾರ್ ಬದಲು ಎನ್.ಶ್ರೀರಾಮ್ ಬಾಲಾಜಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದುಕೊಂಡಿದ್ದೇವೆ. ಆದರೆ ಅವರಿಗೆ ಕಜಕಸ್ತಾನದ ವೀಸಾ ಸಿಗುವುದು ಕಷ್ಟವಾಗಬಹುದು’ ಎಂದೂ ಅವರು ತಿಳಿಸಿದ್ದಾರೆ.</p>.<p>ದೆಹಲಿ ಲಾನ್ ಟೆನಿಸ್ ಸಂಸ್ಥೆಯ (ಡಿಎಲ್ಟಿಎ) ಅಂಗಳದಲ್ಲಿ ಭಾರತ ಡೇವಿಸ್ ಕಪ್ ತಂಡದ ಆಟಗಾರರು ಗುರುವಾರದಿಂದ ಅಭ್ಯಾಸ ನಡೆಸುತ್ತಿದ್ದು ಇದರಲ್ಲಿ ಶ್ರೀರಾಮ್ ಕೂಡಾ ಭಾಗವಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>