ಈಗ ರೋಹಿತ್ ಹಾಗೂ ಕಮಿನ್ಸ್ ನಡುವೆ ಮಗದೊಂದು ಫೈನಲ್ ಪಂದ್ಯ ಏರ್ಪಟ್ಟಿದೆ. ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಅಜೇಯ ಓಟ ಮುಂದುವರಿಸಿರುವ ಟೀಮ್ ಇಂಡಿಯಾ ಗೆಲುವಿನ ವಿಶ್ವಾಸದಲ್ಲಿದೆ. ಭಾರತ ಕ್ರಿಕೆಟ್ ತಂಡದ ಕೋಟ್ಯಂತರ ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದು, ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಭಾರತ ಮೂರನೇ ವಿಶ್ವಕಪ್ ಗೆಲ್ಲುವ ತವಕದಲ್ಲಿದೆ. ಆ ಮೂಲಕ ಕಪಿಲ್ ದೇವ್ ಹಾಗೂ ಮಹೇಂದ್ರ ಸಿಂಗ್ ಧೋನಿ ಸಾಲಿಗೆ ರೋಹಿತ್ ಶರ್ಮಾ ಸೇರ್ಪಡೆಗೊಳ್ಳಲಿದ್ದಾರೆ. ಭಾರತ ಕೊನೆಯದಾಗಿ 2011ರಲ್ಲಿ ತವರಿನಲ್ಲೇ ನಡೆದ ಏಕದಿನ ವಿಶ್ವಕಪ್ ಜಯಿಸಿತ್ತು.
20 ವರ್ಷಗಳ ಹಿಂದೆ ಇದೇ ಆಸ್ಟ್ರೇಲಿಯಾ ತಂಡದ ವಿರುದ್ಧ ಫೈನಲ್ನಲ್ಲಿ ಸೋತಿದ್ದ ಭಾರತ ತಂಡ ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಅಂದು ಸೌರವ್ ಗಂಗೂಲಿ ನೇತೃತ್ವದ ಭಾರತ ತಂಡವನ್ನು ರಿಕಿ ಪಾಂಟಿಂಗ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮಣಿಸಿತ್ತು.
2007ರಲ್ಲಿ ಚೊಚ್ಚಲ ಟ್ವೆಂಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದ ರೋಹಿತ್ 2007ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ಈಗ 12 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್ ದೊರಕಿಸಿಕೊಡುವ ವಿಶ್ವಾಸದಲ್ಲಿದ್ದಾರೆ.