ಭಾರತೀಯ ಕ್ರಿಕೆಟ್ ತಂಡವು ಈಗ ಅದ್ಭುತ ಆಟವನ್ನು ಆಡುತ್ತಿದೆ. ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಸೇರಿದಂತೆ ಎಲ್ಲ ಆಟಗಾರರು ಉತ್ತಮ ಲಯದಲ್ಲಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.
ಭಾರತವು ಈಗ ಪರಿಪೂರ್ಣ ತಂಡವಾಗಿದೆ. ಅಸಾಧಾರಣ ಪ್ರತಿಭೆಗಳನ್ನು ಹೊಂದಿದೆ ಎಂದು ಗಂಗೂಲಿ ಹೇಳಿದ್ದಾರೆ.
ವಾಂಖೆಡೆ ಪಿಚ್ ಅನ್ನು ಭಾರತದ ಅನುಕೂಲಕ್ಕಾಗಿ ಬದಲಾಯಿಸಲಾಗಿತ್ತು ಎಂಬ ಆರೋಪಗಳನ್ನು ಗಂಗೂಲಿ ತಳ್ಳಿ ಹಾಕಿದ್ದಾರೆ.
ನನಗನಿಸುತ್ತದೆ, ಇದೊಂದು ಉತ್ತಮ ಪಿಚ್ ಆಗಿತ್ತು. ಎರಡೂ ತಂಡಗಳಿಗೂ ಸಮಾನವಾಗಿತ್ತು. ವಾಂಖೆಡೆ ಮೈದಾನದಲ್ಲಿ ಯಾವುದೇ ಕೊರತೆ ಇರಲಿಲ್ಲ ಎಂದು ಹೇಳಿದ್ದಾರೆ.