ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, 'ಭಾರತದ ಬ್ಯಾಟರ್ ಶುಭಮನ್ ಗಿಲ್ 2023ರ ಅಕ್ಟೋಬರ್ 9ರಂದು ದೆಹಲಿಗೆ ಪ್ರಯಾಣ ಬೆಳೆಸುತ್ತಿಲ್ಲ. ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಆರಂಭಿಕ ಬ್ಯಾಟರ್, ದೆಹಲಿಯಲ್ಲಿ ಅಫ್ಗಾನಿಸ್ತಾನ ವಿರುದ್ಧ ಅಕ್ಟೋಬರ್ 11ರಂದು ನಡೆಯುವ ಮುಂದಿನ ಪಂದ್ಯಕ್ಕೂ ಲಭ್ಯರಿರುವುದಿಲ್ಲ. ಗಿಲ್ ಚೆನ್ನೈನಲ್ಲಿಯೇ ಉಳಿಯಲಿದ್ದು, ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ' ಎಂದು ತಿಳಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಿಲ್ ಬದಲು ಇಶಾನ್ ಕಿಶನ್ಗೆ ಸ್ಥಾನ ನೀಡಲಾಗಿತ್ತು. ಆದರೆ, ಅವರು ಒಂದೂ ರನ್ ಗಳಿಸಿದೆ ನಿರಾಸೆ ಮೂಡಿಸಿದರು. ಕಿಶನ್ ಮಾತ್ರವಲ್ಲದೆ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಸಹ ಖಾತೆ ತೆರೆಯದೆ ಔಟಾಗಿದ್ದರು. ಆದಾಗ್ಯೂ ಭಾರತ, ಅನುಭವಿ ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಬ್ಯಾಟಿಂಗ್ ಬಲದಿಂದ 6 ವಿಕೆಟ್ ಅಂತರದ ಗೆಲುವು ಸಾಧಿಸಿತು.