<p><strong>ಪುಣೆ:</strong> ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದ ವೇಳೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. </p><p>ಇನಿಂಗ್ಸ್ನ ಒಂಬತ್ತನೇ ಓವರ್ನ ಮೂರನೇ ಎಸೆತದಲ್ಲಿ ಘಟನೆ ನಡೆಯಿತು. ಹಾರ್ದಿಕ್ ಪಾಂಡ್ಯ ದಾಳಿಯಲ್ಲಿ ಬಾಂಗ್ಲಾ ಬ್ಯಾಟರ್ ಲಿಟನ್ ದಾಸ್ ಸ್ಟ್ರೇಟ್ ಡ್ರೈವ್ ಹೊಡೆದರು. ಈ ವೇಳೆ ಕಾಲಿನಲ್ಲಿ ಚೆಂಡನ್ನು ತಡೆಯಲು ವಿಫಲ ಯತ್ನ ನಡೆಸಿದ ಹಾರ್ದಿಕ್ ಪಾಂಡ್ಯ ಎಡವಿ ಬಿದ್ದರು. ಚೆಂಡು ಬೌಂಡರಿ ಗೆರೆ ದಾಟಿತು. </p><p>ನೋವು ತಡೆಯಲಾರದೇ ಕುಂಟುತ್ತಾ ಸಾಗಿದ ಹಾರ್ದಿಕ್ ಪಾಂಡ್ಯ ಅವರಿಗೆ ಫಿಸಿಯೊ ನೆರವನ್ನು ಒದಗಿಸಲಾಯಿತು. ಇದರಿಂದ ಸ್ವಲ್ಪ ಹೊತ್ತು ಪಂದ್ಯಕ್ಕೆ ಅಡ್ಡಿಯಾಯಿತು. ಅಂತಿಮವಾಗಿ ಬೌಲಿಂಗ್ ಮುಂದುವರಿಸಲಾಗದೇ ಮೈದಾನದಿಂದ ಹೊರಗೆ ನಡೆದರು. </p>. <p>ಹಾರ್ದಿಕ್ ಪಾಂಡ್ಯ ಗಾಯದ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಬರಬೇಕಿದೆ. ಬಳಿಕ ಚೆಂಡು ಕೈಗೆತ್ತಿಕೊಂಡ ವಿರಾಟ್ ಕೊಹ್ಲಿ 9ನೇ ಓವರ್ ಪೂರ್ಣಗೊಳಿಸಲು ನೆರವಾದರು. </p><p>ಪಾಂಡ್ಯ ಮೂರು ಎಸೆತಗಳಲ್ಲಿ ಎರಡು ಬೌಂಡರಿ ಬಿಟ್ಟುಕೊಟ್ಚು ದುಬಾರಿಯೆನಿಸಿದರು. ಉಳಿದ ಮೂರು ಎಸೆತಗಳಲ್ಲಿ ವಿರಾಟ್ ಎರಡು ರನ್ ಮಾತ್ರ ಬಿಟ್ಟುಕೊಟ್ಟರು. </p><p>ಈ ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಶಕಿಬ್ ಅಲ್ ಹಸನ್ ಅನುಪಸ್ಥಿತಿಯಲ್ಲಿ ತಂಡವನ್ನು ನಜ್ಮುಲ್ ಹೊಸೇನ್ ಶಾಂತೊ ಮುನ್ನಡೆಸುತ್ತಿದ್ದಾರೆ. </p><p><strong>ಹಾರ್ದಿಕ್ ಪಾಂಡ್ಯಗೆ ಸ್ಕ್ಯಾನಿಂಗ್...</strong></p><p>ಎಡಗಾಲಿಗೆ ಗಾಯಮಾಡಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಕ್ಯಾನಿಂಗ್ ನಡೆಸಲು ಕರೆದೊಯ್ಯಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದ ವೇಳೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. </p><p>ಇನಿಂಗ್ಸ್ನ ಒಂಬತ್ತನೇ ಓವರ್ನ ಮೂರನೇ ಎಸೆತದಲ್ಲಿ ಘಟನೆ ನಡೆಯಿತು. ಹಾರ್ದಿಕ್ ಪಾಂಡ್ಯ ದಾಳಿಯಲ್ಲಿ ಬಾಂಗ್ಲಾ ಬ್ಯಾಟರ್ ಲಿಟನ್ ದಾಸ್ ಸ್ಟ್ರೇಟ್ ಡ್ರೈವ್ ಹೊಡೆದರು. ಈ ವೇಳೆ ಕಾಲಿನಲ್ಲಿ ಚೆಂಡನ್ನು ತಡೆಯಲು ವಿಫಲ ಯತ್ನ ನಡೆಸಿದ ಹಾರ್ದಿಕ್ ಪಾಂಡ್ಯ ಎಡವಿ ಬಿದ್ದರು. ಚೆಂಡು ಬೌಂಡರಿ ಗೆರೆ ದಾಟಿತು. </p><p>ನೋವು ತಡೆಯಲಾರದೇ ಕುಂಟುತ್ತಾ ಸಾಗಿದ ಹಾರ್ದಿಕ್ ಪಾಂಡ್ಯ ಅವರಿಗೆ ಫಿಸಿಯೊ ನೆರವನ್ನು ಒದಗಿಸಲಾಯಿತು. ಇದರಿಂದ ಸ್ವಲ್ಪ ಹೊತ್ತು ಪಂದ್ಯಕ್ಕೆ ಅಡ್ಡಿಯಾಯಿತು. ಅಂತಿಮವಾಗಿ ಬೌಲಿಂಗ್ ಮುಂದುವರಿಸಲಾಗದೇ ಮೈದಾನದಿಂದ ಹೊರಗೆ ನಡೆದರು. </p>. <p>ಹಾರ್ದಿಕ್ ಪಾಂಡ್ಯ ಗಾಯದ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಬರಬೇಕಿದೆ. ಬಳಿಕ ಚೆಂಡು ಕೈಗೆತ್ತಿಕೊಂಡ ವಿರಾಟ್ ಕೊಹ್ಲಿ 9ನೇ ಓವರ್ ಪೂರ್ಣಗೊಳಿಸಲು ನೆರವಾದರು. </p><p>ಪಾಂಡ್ಯ ಮೂರು ಎಸೆತಗಳಲ್ಲಿ ಎರಡು ಬೌಂಡರಿ ಬಿಟ್ಟುಕೊಟ್ಚು ದುಬಾರಿಯೆನಿಸಿದರು. ಉಳಿದ ಮೂರು ಎಸೆತಗಳಲ್ಲಿ ವಿರಾಟ್ ಎರಡು ರನ್ ಮಾತ್ರ ಬಿಟ್ಟುಕೊಟ್ಟರು. </p><p>ಈ ಮೊದಲು ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಶಕಿಬ್ ಅಲ್ ಹಸನ್ ಅನುಪಸ್ಥಿತಿಯಲ್ಲಿ ತಂಡವನ್ನು ನಜ್ಮುಲ್ ಹೊಸೇನ್ ಶಾಂತೊ ಮುನ್ನಡೆಸುತ್ತಿದ್ದಾರೆ. </p><p><strong>ಹಾರ್ದಿಕ್ ಪಾಂಡ್ಯಗೆ ಸ್ಕ್ಯಾನಿಂಗ್...</strong></p><p>ಎಡಗಾಲಿಗೆ ಗಾಯಮಾಡಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಕ್ಯಾನಿಂಗ್ ನಡೆಸಲು ಕರೆದೊಯ್ಯಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾಹಿತಿ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>